ಧಾರ್ಮಿಕ

ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಪೇಜಾವರ ಶ್ರೀಗಳ ಭೇಟಿ

Views: 45

ಕನ್ನಡ ಕರಾವಳಿ ಸುದ್ದಿ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ, ಪರ್ಯಾಯ ಅರ್ಚಕರು ಆದರದಿಂದ ಬರಮಾಡಿಕೊಂಡರು, ನಂತರ ಶ್ರೀಪಾದರು ದೇವರಿಗೆ ವಿಶೇಷ ಮಂಗಳಾರತಿ ನೆರವೇರಿಸಿದರು.

ವೇ|ಮೂ| ಹೂವಿನಕೆರೆ ವಾದಿರಾಜ ಭಟ್, ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ವಿದ್ವಾನ್ ರಘುಪತಿ ಉಪಾಧ್ಯಾಯ ಮತ್ತು ಆಯುರ್ವೇದ ವೈದ್ಯ ಡಾ। ಕೆ.ಪ್ರಾಣದೇವ ಉಪಾಧ್ಯಾಯ ಅವರಿಗೆ ಫಲ ಮಂತ್ರಾಕ್ಷತೆಯೊಂದಿಗೆ ಸಮ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ  ಶ್ರೀರಮಣ ಉಪಾಧ್ಯಾಯ, ಸಹ ಧರ್ಮದರ್ಶಿಗಳಾದ ಪದ್ಮನಾಭ ಉಪಾಧ್ಯಾಯ, ನಿರಂಜನ ಉಪಾಧ್ಯಾಯ ಮತ್ತು ಆಡಳಿತ ಸಿಬಂದಿ, ಪರ್ಯಾಯ ಅರ್ಚಕ ವ್ಯಾಸ ಉಪಾಧ್ಯಾಯ ಮತ್ತು ಸಹೋದರರು, ಅರ್ಚಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related Articles

Back to top button
error: Content is protected !!