ಕೃಷಿ

ಕೃಷಿಗೆ ನೀರು ಹಾಯಿಸಲು ತೆರಳಿದ್ದ ವೇಳೆ ಏಕಾಏಕಿ ಚಿರತೆ ದಾಳಿ, ವ್ಯಕ್ತಿ ಸಾವು

Views: 80

ಕನ್ನಡ ಕರಾವಳಿ ಸುದ್ದಿ: ಕೃಷಿಗೆ ರಾತ್ರಿ ವೇಳೆ ನೀರು ಹಾಯಿಸಲು ತೆರಳಿದ್ದ ಸಹೋದರರ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೊಬ್ಬ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಕಣವಿಶಿದ್ಗೇರಿ ಗ್ರಾಮದಲ್ಲಿ ನಡೆದಿದೆ.

ಚಿರತೆ ದಾಳಿಗೊಳಗಾದ ಗ್ರಾಮದ ಬೀರಪ್ಪ ಹನುಮಂತಪ್ಪ ಬಳಗಾವಿ (30) ಮೃತಪಟ್ಟಿದ್ದು, ಇನ್ನೊಬ್ಬ ಸಹೋದರ ಗಣೇಶ ಬಳಗಾವಿ ಗಂಭೀರ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ತಮ್ಮ ಕೃಷಿಗೆ ನೀರು ಹಾಯಿಸಲು ತೆರಳಿದ್ದ ವೇಳೆ ಏಕಾಏಕಿ ಚಿರತೆ ದಾಳಿ ನಡೆಸಿದ್ದು ಸ್ಥಳದಲ್ಲಿಯೇ ಬೀರಪ್ಪ ಎಂಬುವರು ಮೃತಪಟ್ಟಿದ್ದಾರೆ. ಇನ್ನೊಬ್ಬ ಸಹೋದರ ಗಣೇಶ ಎಂಬುವರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ರಟ್ಟಿಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿದ್ದಾರೆ. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.‌

Related Articles

Back to top button