ಶಿಕ್ಷಣ

ಕೋಟ ವಿವೇಕ ಪದವಿ ಪೂರ್ವ ಕಾಲೇಜು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ

Views: 28

ಕನ್ನಡ ಕರಾವಳಿ ಸುದ್ದಿ:2025 -26 ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿವೇಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಾಗ್ಮಿ, ಉತ್ತಮ ಚಿಂತಕ ಶ್ರೀ ದಾಮೋದರ್ ಶರ್ಮ ಬಾರ್ಕೂರು ಇವರು ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪದವಿ ಪೂರ್ವ ಶಿಕ್ಷಣದಲ್ಲಿ ದ್ವಿತೀಯ ಪಿಯುಸಿ ಒಂದು ಮಹತ್ತರ ಘಟ್ಟವಾಗಿದ್ದು ವಿದ್ಯಾರ್ಥಿಗಳು ದೃತಿಗೆಡದೆ ಸಂಯಮದಿಂದ ಅಧ್ಯಯನವನ್ನು ನಡೆಸಬೇಕು. ಓದಿನೊಂದಿಗೆ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಮನೆಯಲ್ಲಿ ಮೊದಲು ಹಿರಿಯವರಿಗೆ ,ತಂದೆ ತಾಯಂದಿರಿಗೆ ಗೌರವ ನೀಡುವುದನ್ನು ಕಲಿತುಕೊಳ್ಳಬೇಕು, ಯಾವುದೇ ಕಾರಣಕ್ಕೂ ತಂದೆ ತಾಯಿಂದಿರ ಮನಸ್ಸಿಗೆ ನೋವನ್ನುಂಟುಮಾಡಬಾರದು. ಹಾಗೆ ಶಾಲೆಯಲ್ಲಿ ಗುರುಹಿರಿಯರು ಬೋಧಿಸುವಂತಹ ಪಾಠಗಳನ್ನು ತಾಳ್ಮೆಯಿಂದ ಕೇಳಿ ಗುರು ಹಿರಿಯರಿಗೂ ಗೌರವವನ್ನು ನೀಡಬೇಕು. ಜೀವನದಲ್ಲಿ ಉತ್ತಮ ಸಂಸ್ಕಾರಗಳನ್ನು ಕಲಿಯುವುದರ ಮೂಲಕ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಬೇಕು. ವಿದ್ಯಾಭ್ಯಾಸದ ಸಂದರ್ಭದಲ್ಲಿ ಮನಸ್ಸನ್ನು ಹಾಳು ಮಾಡುವಂತಹ ಮೊಬೈಲ್ ಹಾಗೂ ಸಮೂಹ ಮಾಧ್ಯಮಗಳಿಂದ ದೂರವಿರಬೇಕು ಏಕಾಗ್ರತೆಗೆ ತೊಂದರೆ ಉಂಟು ಮಾಡುವ ಫೇಸ್ಬುಕ್, ಇನ್ಸ್ಟಾ ಗ್ರಾಂ, ಸ್ನ್ಯಾಪ್ ಚಾಟ್ ಮುಂತಾದವುಗಳಿಂದ ಜಾಗೃತರಾಗಿರಬೇಕು ,ಎಂದು ಕಥೆ ಉಪಕಥೆಗಳ ಮೂಲಕ ಮನಮುಟ್ಟುವಂತೆ ತಿಳಿಸಿದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟ ವಿದ್ಯಾಸಂಘದ ಅಧ್ಯಕ್ಷರಾದ ಸಿ ಎ , ಪಿ ಪ್ರಭಾಕರ ಮಯ್ಯ ಇವರು ವಹಿಸಿದ್ದರು.

ಪ್ರಾಂಶುಪಾಲರಾದ ಶ್ರೀ ಜಗದೀಶ ನಾವಡ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಉಪನ್ಯಾಸಕರಾದ ಶ್ರೀಸಂಜೀವ ಜಿ ವಂದಿಸಿದರು.

ಶ್ರೀ ಶಿವಪ್ರಸಾದ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button