ಶಿಕ್ಷಣ

ಗುರುಕುಲ ಪದವಿಪೂರ್ವ ಕಾಲೇಜಿನಲ್ಲಿ ‘ಪರಿಚಯ’ ಕಾರ್ಯಕ್ರಮ

Views: 45

ಕನ್ನಡ ಕರಾವಳಿ ಸುದ್ದಿ: ಪ್ರಥಮ ವರ್ಷದ ಪದವಿಪೂರ್ವ ವಿದ್ಯಾರ್ಥಿಗಳನ್ನು ‘ಪರಿಚಯ’ ಮೂಲಕ ಬರಮಾಡಿಕೊಳ್ಳುವ ಕಾರ್ಯಕ್ರಮ ಜೂನ್ 23ರಂದು ನಡೆಯಿತು.

ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು .ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಹಾಗೂ ಆಡಳಿತಾಧಿಕಾರಿ ಶ್ರೀ ಸುರೇಶ್ ಉಪಸ್ಥಿತರಿದ್ದರು .

ಗಣಕ ವಿಜ್ಞಾನ ಉಪನ್ಯಾಸಕ ಶ್ರೀ ರಾಘವೇಂದ್ರ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರಶಾಂತ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಅಂತಿಮವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಲಾಯಿತು. 

ಅರ್ಥಶಾಸ್ತ್ರದ ಉಪನ್ಯಾಸಕಿ ರಶ್ಮಿಕಾ ವಂದಿಸಿದರು.

Related Articles

Back to top button