ಕ್ರೀಡೆ
ಟೀಂ ಇಂಡಿಯಾ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಕೊಲ್ಲೂರು ಮೂಕಾಂಬಿಕೆಯ ದರ್ಶನ

Views: 69
ಕುಂದಾಪುರ: ಟೀಂ ಇಂಡಿಯಾ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ವತಿಯಿಂದ ಕೆ.ಎಲ್.ರಾಹುಲ್ ಅವರನ್ನು ಗೌರವಿಸಲಾಯಿತು.
ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಸಾರ್ವಜನಿಕ ಸಂಪರ್ಕಾಧಿಕಾರಿ ಜಯಕುಮಾರ್, ಅರ್ಚಕ ಸುರೇಶ್ ಭಟ್ ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.






