ರಾಜಕೀಯ

ಡಿಕೆಶಿಯಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರ್ಯನನಗಿಲ್ಲ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ

Views: 40

ಕನ್ನಡ ಕರಾವಳಿ ಸುದ್ದಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರವನ್ನು ನಾಡಿನ ಜನತೆ ನನಗೆ ಕೊಟ್ಟಿಲ್ಲ. ಆ ಪಾಪದ ಹಣ ಲೂಟಿ ಹೊಡೆದಿರುವ ಹಣ ಮಾಡಿರುವ ಅವರಿಂದ ನಾನು ಬಟ್ಟೆ ತರಿಸಿಕೊಳ್ಳಬೇಕಾ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

2028ಕ್ಕೆ ಜೆಡಿಎಸ್ -ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾನೇ ಕುಮಾರಸ್ವಾಮಿಗೆ ಬಟ್ಟೆ ಹೊಲಿಸಿಕೊಡುತ್ತೇನೆ ಎಂಬ ಡಿ.ಕೆ ಶಿವಕುಮಾರ್ ಅವರ ವ್ಯಂಗ್ಯಭರಿತ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಡಿಕೆಶಿಯಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರ್ಯ ನನಗಿಲ್ಲ. ನನಗೆ ಬಟ್ಟೆ ಬೇಕಾದರೆ ನನ್ನನ್ನು ಬೆಳೆಸಿರುವ ನಾಡಿನ ಜನತೆ ಕೊಡುತ್ತಾರೆ. ಪಾಪದ ಹಣ ಲೂಟಿ ಹೊಡೆದ ಹಣದಿಂದ ಬಟ್ಟೆ ತರಿಸಿಕೊಳ್ಳಬೇಕಾ ಎಂದು ವಾಗ್ದಾಳಿ ನಡೆಸಿದರು.

ಡಿ.ಕೆ ಶಿವಕುಮಾರ್ ಅವರಿಗೆ ದುಡ್ಡಿನ ದಾರಿದ್ರ್ಯ ಇದೆ. ಹಾಗಾಗಿ ಲೂಟಿ ಹೊಡೆಯುತ್ತಿದ್ದಾರೆ. ಆ ಹಣದಿಂದ ನಾನು ಬಟ್ಟೆ ತರಿಸಿಕೊಳ್ಳುವಷ್ಟು ದಾರಿದ್ರ್ಯವನ್ನು ನಾಡಿನ ಜನತೆ ನೀಡಿಲ್ಲ ಎಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.

 

Related Articles

Back to top button