ಕೃಷಿ
ತಮಿಳುನಾಡಿಗೆ ನೀರು ಬಿಟ್ಟರೆ ಬೆಂಗಳೂರಿಗೆ ಸಂಕಷ್ಟ

Views: 0
ಮಂಡ್ಯ: ಮುಂದಿನ ಹದಿನೈದು ದಿನ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಟ್ಟರೆ 7 ಟಿಎಂಸಿ ನೀರು ಕೆಆರ್ಎಸ್ನಿಂದ (KRS) ಖಾಲಿಯಾಗಲಿದೆ. ಈ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ಪಾಲಿಸಿದರೆ ಸಂಕಷ್ಟ ಎದುರಾಗುವ ಭೀತಿ ಶುರುವಾಗಿದೆ.
ಸದ್ಯ ಡ್ಯಾಂನಲ್ಲಿ 24 ಟಿಎಂಸಿ ನೀರು ಮಾತ್ರ ಶೇಖರಣೆ ಇದೆ. ನೀರು ಬಿಟ್ಟರೆ ಅದು 17 ಟಿಎಂಸಿಗೆ ಇಳಿಯಲಿದೆ. 17 ಟಿಎಂಸಿಯಲ್ಲಿ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಲಿದೆ. ಈ 5 ಟಿಎಂಸಿ ನೀರನ್ನ ಬಳಿಕೆ ಮಾಡಲು ಸಾಧ್ಯವಾಗುವುದಿಲ್ಲ. ಆಗ ಬಳಕೆಗೆ ಉಳಿಯುವುದು ಕೇವಲ 13 ಟಿಎಂಸಿ ನೀರು ಮಾತ್ರ. ಅಷ್ಟು ನೀರಿನಲ್ಲಿ ಕುಡಿಯಲೂ ಸಹ ನೀರು ಕೊಡುವುದು ಕಷ್ಟವಾಗಲಿದೆ. ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ (Bengaluru) ಜನರಿಗೆ ಡಿಸೆಂಬರ್ ಕೊನೆಯ ವಾರದಲ್ಲೇ ನೀರಿನ ಸಮಸ್ಯೆ ಕಾಡಲಲಿದೆ.






