ಇತರೆ
ತೆಕ್ಕಟ್ಟೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ವಕ್ವಾಡಿ ಸಂಪತ್ ಕುಮಾರ್ ಶೆಟ್ಟಿ ಆಯ್ಕೆ
Views: 30
ಕನ್ನಡ ಕರಾವಳಿ ಸುದ್ದಿ: ತೆಕ್ಕಟ್ಟೆ ಲಯನ್ಸ್ ಕ್ಲಬ್ 2026-27ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ವಕ್ವಾಡಿ ಸಂಪತ್ ಕುಮಾರ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಕುಂಭಾಶಿಯ ಶ್ರೀ ಸಿದ್ಧಿ ವಿನಾಯಕ ಬಿಲ್ಡಿಂಗ್ ಮೆಟೀರಿಯಲ್ಸ್ ಇದರ ಮಾಲೀಕರಾದ ಸಂಪತ್ ಕುಮಾರ್ ಶೆಟ್ಟಿ ಅವರು ಸಮಾಜಮುಖಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ಅವರ ನಾಯಕತ್ವದಲ್ಲಿ ಕ್ಲಬ್ ಇನ್ನಷ್ಟು ಸೇವಾ ಕಾರ್ಯಕ್ರಮಗಳಲ್ಲಿ ಉತ್ತಮ ಬದಲಾವಣೆಗೆ ಎಲ್ಲರೂ ಶುಭ ಹಾರೈಸಿದ್ದಾರೆ. ಜುಲೈ 22ರಂದು ಕುಂಭಾಶಿಯ ಗಾಯತ್ರಿ ಸಭಾಭವನದಲ್ಲಿ ಪದ ಪ್ರಧಾನ ಸಮಾರಂಭ ನಡೆಯಲಿದೆ. ಎಂದು ಲಯನ್ಸ್ ಕ್ಲಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






