ಶಿಕ್ಷಣ
ದ್ವಿತೀಯ ಪಿಯುಸಿ ಪರೀಕ್ಷೆ ಫೇಲಾದವರು ಸಿಇಟಿ ಬರೆಯಬಹುದು: ಕೆಇಎ ಹೊಸ ಘೋಷಣೆ

Views: 45
ಕನ್ನಡ ಕರಾವಳಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಿಇಟಿ ಬರೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊಸ ಘೋಷಣೆಯೊಂದನ್ನು ಮಾಡಿದೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಮತ್ತು ಪರೀಕ್ಷೆ-3 ಬರೆಯಲು ಅವಕಾಶ ಇರುವ ಕಾರಣ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ ಎಲ್ಲ ವಿದ್ಯಾರ್ಥಿಗಳೂ ಸಿಇಟಿಗೆ ಹಾಜರಾಗಬಹುದು ಎಂದು ಪರೀಕ್ಷಾ ಪ್ರಾಧಿಕಾರ ಹೇಳಿದೆ.
ಏ.16 ಮತ್ತು 17ರಂದು ವಿಜ್ಞಾನ ವಿಷಯಗಳಿಗೆ ಸಿಇಟಿ ನಡೆಯುಲಿದೆ. ಹೊರನಾಡು ಕನ್ನಡಿಗರಿಗೆ ಏ.15ರಂದು ಕನ್ನಡ ಪರೀಕ್ಷೆ ಇರುತ್ತದೆ. ಈ ವರ್ಷ 3.3 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯಲು ಶುಲ್ಕ ಪಾವತಿಸಿದ್ದಾರೆ.