ಕರಾವಳಿ
ಧರ್ಮಸ್ಥಳ ಪ್ರಕರಣ: ಹೆಚ್ಚುವರಿಯಾಗಿ 20ಕ್ಕೂ ಹೆಚ್ಚು ಖಡಕ್ ಅಧಿಕಾರಿಗಳ ನೇಮಕ

Views: 215
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ರಚನೆ ಮಾಡಿದ್ದು, ಈ ತಂಡದಲ್ಲಿ 20ಕ್ಕೂ ಅಧಿಕ ಹೆಚ್ಚುವರಿ ಅಧಿಕಾರಿಗಳ ನೇಮಕ ಮಾಡಲಾಗಿದೆ.
ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್ಐಟಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದ್ದು ಎಸ್ಐಟಿ ಸದಸ್ಯರಾಗಿ ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಸೇರಿದಂತೆ ಕೆಲವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಹೆಚ್ಚುವರಿಯಾಗಿ ಖಡಕ್ 20 ಅಧಿಕಾರಿಗಳನ್ನು ಸರ್ಕಾರ ನೇಮಿಸಿದೆ ಎನ್ನಲಾಗಿದೆ.






