ನಾಳೆ ರೈತರ ಖಾತೆಗೆ ಪಿಎಂ ಕಿಸಾನ್ 20ನೇ ಕಂತಿನ 2 ಸಾವಿರ ಹಣ ರೈತರ ಖಾತೆಗೆ ಜಮೆ

Views: 30
ಕನ್ನಡ ಕರಾವಳಿ ಸುದ್ದಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಎರಡು ಸಾವಿರ ಹಣ ಶನಿವಾರ ರೈತರ ಖಾತೆಗೆ ಜಮೆಯಾಗಲಿದೆ. ಈ ಯೋಜನೆಯ ಮೂಲಕ ಇಲ್ಲಿಯವರೆಗೆ 19 ಬಾರಿ ಹಣ ಮಂಜೂರು ಮಾಡಲಾಗಿದೆ ಮತ್ತು ಇದೀಗ 20ನೇ ಬಾರಿಗೆ ರೈತರ ಖಾತೆಗಳಿಗೆ ಹಣ ಜಮಾ ಮಾಡಲಾಗುತ್ತಿದೆ.
ಕಿಸಾನ್ ಸಮ್ಮಾನ್ ಯೋಜನೆಯನ್ನು 2019 ಫೆಬ್ರವರಿ 24 ರಂದು ಪ್ರಾರಂಭಿಸಲಾಯಿತು. ಕಳೆದ ಅರ್ಹ ರೈತರ ಖಾತೆಗಳಿಗೆ 19 ಕಂತುಗಳಲ್ಲಿ ಹಣ ಜಮೆ ಮಾಡಲಾಗಿದೆ. 18 ಕಂತುಗಳಲ್ಲಿ 11 ಕೋಟಿ ರೈತರಿಗೆ 3.46 ಲಕ್ಷ ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ. ಬಿಹಾರದ ಭಾಗಲ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 19ನೇ ಕಂತಿನ ಕಿಸಾನ್ ಸಮ್ಮಾನ್ ನಿಧಿಯನ್ನು ಬಿಡುಗಡೆ ಮಾಡಿದರು. ಇದರಿಂದ 9.7 ಕೋಟಿ ರೈತರಿಗೆ 22 ಸಾವಿರ ಕೋಟಿ ರೂ.ಗಳ ಆರ್ಥಿಕ ನೆರವು ದೊರೆಯಲಿದೆ.
ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ಪ್ರತಿ ವರ್ಷ ತಲಾ 6 ಸಾವಿರ ರೂ.ಗಳನ್ನು ಮೂರು ಕಂತುಗಳಲ್ಲಿ ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಮೊದಲ ಕಂತಿನ ಹಣವನ್ನು ಏಪ್ರಿಲ್-ಜುಲೈನಲ್ಲಿ, ಎರಡನೇ ಕಂತಿನ ಹಣವನ್ನು ಆಗಸ್ಟ್-ನವೆಂಬರ್ನಲ್ಲಿ ಮತ್ತು ಮೂರನೇ ಕಂತಿನ ಹಣವನ್ನು ಡಿಸೆಂಬರ್-ಮಾರ್ಚ್ನಲ್ಲಿ ಜಮಾ ಮಾಡಲಾಗುತ್ತಿದೆ. ಇದೀಗ 20ನೇ ಕಂತಿನ ಹಣವನ್ನು ಬಿಹಾರದ ಸಿವಾನ್ ಅಥವಾ ಒಡಿಶಾದ ಭುವನೇಶ್ವರದ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.