ಇತರೆ
ನೇತ್ರ ತಜ್ಞ ಡಾ. ಭುಜಂಗ ಶೆಟ್ಟಿ ನಿಧನ

Views: 0
ಖ್ಯಾತ ನೇತ್ರ ತಜ್ಞ ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ. ಕೆ. ಭುಜಂಗ ಶೆಟ್ಟಿ (68) ಹೃದಯಾಘಾತದಿಂದ ಶುಕ್ರವಾರ ನಿಧನರಾದರು.
ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿ ಸಂಜೆ ಮನೆಗೆ ಬಂದ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಚಿಕಿತ್ಸೆಗೆ ಫಲಿಸದೆ ರಾತ್ರಿ ನಿಧನರಾದರು.
ಕಣ್ಣಿನ ಚಿಕಿತ್ಸೆಗೆ ಸಂಬಂಧಿಸಿದಂತೆ ಅತ್ಯಾಧುನಿಕ ಚಿಕಿತ್ಸಾ ಪದ್ಧತಿಗಳನ್ನು ಜಾರಿಗೆ ತಂದಿದ್ದಾರೆ.






