ಜನಮನ

ನೈರುತ್ಯ ಮಾನ್ಸೂನ್ ಚುರುಕು: ಕರಾವಳಿ ಸೇರಿದಂತೆ ಮೇ 27ರವರೆಗೆ ಗುಡುಗು ಸಹಿತ ಮಳೆ ನಿರೀಕ್ಷೆ

Views: 56

ಕನ್ನಡ ಕರಾವಳಿ ಸುದ್ದಿ: ನೈಋತ್ಯ ಮಾನ್ಸೂನ್ ಆಗ್ನೇಯ ಅರೇಬಿಯನ್ ಸಮುದ್ರ, ನೈಋತ್ಯ ಮತ್ತು ಆಗ್ನೇಯ ಬಂಗಾಳಕೊಲ್ಲಿಯ ಕೆಲವು ಭಾಗಗಳು, ಅಂಡಮಾನ್ ಸಮುದ್ರ, ಸಂಪೂರ್ಣ ನಿಕೋಬಾರ್ ದ್ವೀಪಗಳು ಮತ್ತು ಶ್ರೀ ವಿಜಯಪುರಂ ಸೇರಿದಂತೆ ಅಂಡಮಾನ್ ದ್ವೀಪಗಳ ಕೆಲವು ಭಾಗಗಳಿಗೆ ಮುನ್ನಡೆದಿದೆ ಎಂದು ಐಎಂಡಿ ತಿಳಿಸಿದೆ.

ಮುಂದಿನ ಮೂರು ನಾಲ್ಕು ದಿನಗಳಲ್ಲಿ ಆಗ್ನೇಯ ಅರೇಬಿಯನ್ ಸಮುದ್ರ, ನೈಋತ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳಿಗೆ ಮಾನ್ಸೂನ್ ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಅದು ಹೇಳಿದೆ.

ಮೇ 26 ರಂದು ಕೇರಳದಲ್ಲಿ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ. ಕೇರಳದಲ್ಲಿ ಸಾಮಾನ್ಯವಾಗಿ ಜೂನ್ 1 ರಂದು ಮಾನ್ಸೂನ್ ಆರಂಭವಾಗುತ್ತದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 27ರವರೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ

ಮುಂದಿನ 7 ದಿನಗಳ ಮಳೆ ಮುನ್ಸೂಚನೆ:

ಮೇ 24-25: ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಮತ್ತು ತುಮಕೂರು ಭಾಗಗಳಲ್ಲಿ ಗಾಳಿ ಸಹಿತ ಮಳೆ.

ಮೇ 26-27: ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ದಕ್ಷಿಣದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಕೆ.

ಮೇ 28-29: ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.

 

Related Articles

Back to top button
error: Content is protected !!