ಕರಾವಳಿ

ಪುತ್ತೂರು: ಸರ್ಕಾರಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ, ರಿಕ್ಷಾ ಚಾಲಕ ಮೃತ್ಯು

Views: 68

ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಸರ್ಕಾರಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27 ರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ

ಆಟೋ ರಿಕ್ಷಾ ಚಾಲಕ ಜೈಸನ್ (30ವ) ಮೃತಪಟ್ಟವರು.

ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ಧಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ತೀರ್ವತೆಗೆ ರಿಕ್ಷಾ ನಜ್ಜುಗುಜ್ಜಾಗಿದ್ದು, ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದು ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್‌ ಅವರನ್ನು ಹೊರತೆಗೆದಿದ್ದಾರೆ.

Related Articles

Back to top button
error: Content is protected !!