ಸಾಂಸ್ಕೃತಿಕ
ಪುಷ್ಪ 2 ಖ್ಯಾತಿಯ ನಟ ಅಲ್ಲು ಅರ್ಜುನ್ ಪೊಲೀಸ್ ವಶಕ್ಕೆ

Views: 255
ಕನ್ನಡ ಕರಾವಳಿ ಸುದ್ದಿ : ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೈದರಾಬಾದ್ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಕರೆದೊಯ್ದಿದ್ದಾರೆ.
ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39)ಎಂಬ ಮಹಿಳೆ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಥಿಯೆಟರ್ ಮಾಲೀಕ ಹಾಗೂ ಇಬ್ಬರು ವ್ಯವಸ್ಥಾಪಕರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಈ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ.






