ಆರೋಗ್ಯ

ಬಸ್ರೂರು ನಿವೇದಿತಾ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Views: 46

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಬಸ್ರೂರು ನಿವೇದಿತಾ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಬಸ್ರೂರು ಶ್ರೀಶ ಮೆಡಿಕಲ್ ಇದರ ವ್ಯವಸ್ಥಾಪಕರಾದ ಪ್ರಭಾಕರ ಐತಾಳ್  ಅವರು ಉದ್ಘಾಟಿಸಿದರು.

ಅವರು ಶಾಲಾ ವಿದ್ಯಾರ್ಥಿಗಳಿಗೆ ಪ್ರಾಣಾಯಾಮದ ಪ್ರಯೋಜನಗಳನ್ನು ತಿಳಿಸಿ ಪ್ರಾತ್ಯಕ್ಷಿಕೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೇದಿತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ  ಸುಬ್ಬಣ್ಣ ಕೋಣಿ ವಹಿಸಿದ್ದರು.

ಶಿಕ್ಷಕ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ನಿವೇದಿತಾ ಪ್ರೌಢಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ನೀಡಿದರು. ಶಿಕ್ಷಕರಾದ ಪ್ರಶಾಂತ್,ನಾಗರತ್ನ, ರೀಮಾ ಇವರು ಉಪಸ್ಥಿತರಿದ್ದರು.

ಸರೋಜಾ ಎಂ ಕಾರ್ಯಕ್ರಮ ನಿರೂಪಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ರಾಜಾರಾಮ್ ಶೆಟ್ಟಿ ವಂದಿಸಿದರು.

Related Articles

Back to top button