ಇತರೆ

ಬಾರ್ಕೂರು: ಯಡ್ತಾಡಿಯಲ್ಲಿ ಕಲ್ಲು ಕ್ವಾರಿ ಹೊಂಡದಲ್ಲಿ ಮುಳುಗಿ ಯುವಕ ಸಾವು 

Views: 55

ಕನ್ನಡ ಕರಾವಳಿ ಸುದ್ದಿ: ಬಾರ್ಕೂರು ಸಮೀಪ ಯಡ್ತಾಡಿಯ ಕಲ್ಲು ಕ್ವಾರಿ ಹೊಂಡದ ನೀರಿನಲ್ಲಿ ಮುಳುಗಿ ಯುವಕ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಮನೋಹರ ನಾಯ್ಕ (30) ಮೃತಪಟ್ಟವರು. ಸ್ನೇಹಿತನೊಂದಿಗೆ ಕಲ್ಲು ಕ್ವಾರಿ ಬಳಿ ತೆರಳಿದ್ದರು. ಆ ಪೈಕಿ ನೀರಿಗೆ ಇಳಿದ ಮನೋಹರ ಮೃತಪಟ್ಟಿದ್ದಾರೆ. ಅವರು ಫಿಡ್ಸ್ ಕಾಯಿಲೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ಕೂಲಿ ಕೆಲಸಕ್ಕೆ ತೆರಳುತ್ತಿದ್ದು ತಂದೆ, ತಾಯಿ ಸಹೋದರನನ್ನು ಅಗಲಿದ್ದಾರೆ.

Related Articles

Back to top button
error: Content is protected !!