ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ? ವಿಜಯೇಂದ್ರ ಹೆಸರು ಒಪ್ಪದ ವರಿಷ್ಠರು!

Views: 0

ನಾಲ್ಕೈದು ತಿಂಗಳಿಂದ ಹಗ್ಗ ಜಗ್ಗಾಟವಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಗೊಂದಲ ಬಹುತೇಕ ಪೂರ್ಣಗೊಂಡಿದ್ದು, ಮುಂದಿನವಾರ ಹೆಸರು ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿ ಎಲ್ ಸಂತೋಷ್ ಟೀಂನೊಂದಿಗೆ ಸಮಾನ ಆಸಕ್ತಿ ಹೊಂದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹುದ್ದೆಗೆ ಏರುವುದು ಬಹುತೇಕ ನಿಶ್ಚಿತ ಎನ್ನಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನಾ ಆಯಾಮಗಳಿಂದ ಪರಾಮರ್ಶೆ ನಡೆಸಿದ ಹೈಕಮಾಂಡ್‌, ಶೋಭಾ ಕರಂದ್ಲಾಜೆ ಈ ಸ್ಥಾನಕ್ಕೆ ಒಮ್ಮತದ ಆಯ್ಕೆಯಾಗಬಹುದು ಎಂಬ ಲೆಕ್ಕಾಚಾರಕ್ಕೆ ಬಂದಿದೆ. ಈ ನೇಮಕಕ್ಕೆ ಬಿಎಸ್‌ವೈ ಬೆಂಬಲಿಸುತ್ತಾರೆ. ಇತರ ನಾಯಕರೂ ನಿರಾಕರಣೆ ಮಾಡುವುದಿಲ್ಲಎಂಬ ಅಂಶವನ್ನು ಹೈಕಮಾಂಡ್‌ ಕಂಡುಕೊಂಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿಗೆ ಪ್ರಮುಖರ ಅಭಿಪ್ರಾಯ ಕೇಳಲಾಗಿದ್ದು, ಶೀಘ್ರದಲ್ಲೆ ಹೈಕಮಾಂಡ್‌ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ

ಶೋಭಾ ಕರಂದ್ಲಾಜೆ ಈ ಸ್ಥಾನಕ್ಕೆ ಒಮ್ಮತದ ಆಯ್ಕೆಯಾಗಬಹುದು ಎಂಬುದು ಹೈಕಮಾಂಡ್ ಲೆಕ್ಕಾಚಾರ ಈ ಸಂಬಂಧ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಪ್ರಮುಖರ ಅಭಿಪ್ರಾಯ ಕೇಳಲಾಗಿದ್ದು, ಶೀಘ್ರದಲ್ಲೆಹೈಕಮಾಂಡ್‌ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಸದ್ಯಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ತರುವುದು ಬಿಎಸ್‌ವೈ ಅಪೇಕ್ಷೆಯಾಗಿತ್ತು.

ಆದರೆ, ಪಕ್ಷದ ಮತ್ತೊಂದು ಬಣ ಈ ಪ್ರಸ್ತಾಪಕ್ಕೆ ಹೈಕಮಾಂಡ್‌ ಅಂಗಳದಲ್ಲಿ ವಿರೋಧ ವ್ಯಕ್ತಪಡಿಸಿತ್ತು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಯಡಿಯೂರಪ್ಪ ಸಹಕಾರ ಅವಶ್ಯಕ. ಹಾಗಾಗಿ ವಿಜಯೇಂದ್ರ ಬದಲಿಗೆ ಬಿಎಸ್‌ವೈ ಅವರ ಹಿರಿಯ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಪ್ರಮುಖ ಜವಾಬ್ದಾರಿ ನೀಡಲು ಹೈಕಮಾಂಡ್‌ ಪರಿಶೀಲಿಸಿತ್ತು. ಈ ಪ್ರಸ್ತಾಪವನ್ನು ಬಿಎಸ್‌ವೈ ಸ್ಪಷ್ಟವಾಗಿ ತಳ್ಳಿ ಹಾಕಿದ್ದರು ಎಂದು ಹೇಳಲಾಗಿತ್ತು.

ಪಕ್ಷ ಸಂಘಟನೆ ದೃಷ್ಟಿಯಿಂದ ಈ ಹುದ್ದೆಗೆ ವಿಜಯೇಂದ್ರ ಹೆಸರನ್ನೇ ಪರಿಗಣಿಸಿ ಎಂದು ಇತ್ತೀಚೆಗೆ ದಿಲ್ಲಿಗೆ ಭೇಟಿ ನೀಡಿದ್ದ ಬಿಎಸ್‌ವೈ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದರು ಎನ್ನಲಾಗಿತ್ತು.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ನಾನಾ ಆಯಾಮಗಳಿಂದ ಪರಾಮರ್ಶೆ ನಡೆಸಿದ ಹೈಕಮಾಂಡ್‌, ಶೋಭಾ ಕರಂದ್ಲಾಜೆ ಈ ಸ್ಥಾನಕ್ಕೆ ಒಮ್ಮತದ ಆಯ್ಕೆಯಾಗಬಹುದು ಎಂಬ ಲೆಕ್ಕಾಚಾರಕ್ಕೆ ಬಂದಿದೆ. ಈ ನೇಮಕಕ್ಕೆ ಬಿಎಸ್‌ವೈ ಬೆಂಬಲಿಸುತ್ತಾರೆ. ಇತರ ನಾಯಕರೂ ನಿರಾಕರಣೆ ಮಾಡುವುದಿಲ್ಲಎಂಬ ಅಂಶವನ್ನು ಹೈಕಮಾಂಡ್‌ ಕಂಡುಕೊಂಡಿದೆ.

ಈ ನಡುವೆ ಶೋಭಾ ಕರಂದ್ಲಾಜೆ ನಿಯೋಜನೆ ಸಂಬಂಧದಲ್ಲಿ ಬಿಎಸ್‌ವೈ ಅವರನ್ನು ಸಂಪರ್ಕಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿಪ್ರಾಯ ಪಡೆದಿದ್ದಾರೆ ಎಂದು ಉನ್ನತ ಮೂಲಗಳು ಹೇಳುತ್ತವೆ.

ಪ್ರತಿಪಕ್ಷ ನಾಯಕ ವಿಳಂಬ?

ಇದೇ ಸಮಯದಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆಯ ವಿಷಯ ನ್ನೆಲೆಗೆ ಬಂದಿದೆ ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಪರವಾಗಿ ಬ್ಯಾಟ್ ಬೀಸಿದರೆ ಸಂತೋಷ ಟೀಂ ಬಸವನಗೌಡ ಪಾಟೀಲ್ ಯತ್ನಾಳ್ ಪರವಾಗಿ ಲಾಭಿ ನಡೆಸಿದ್ದಾರೆ ಆದ್ದರಿಂದ ಮೊದಲಿಗೆ ರಾಜ್ಯಾಧ್ಯಕ್ಷರ ಹೆಸರು ಘೋಷಿಸಿ ಬಳಿಕ ಶಾಸಕಾಂಗ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲು ಬಿಜೆಪಿ ವರಿಷ್ಠರು ತೀರ್ಮಾನ ಕೈಗೊಂಡಿದ್ದಾರೆ.

Related Articles

Back to top button
error: Content is protected !!