ರಾಜಕೀಯ

ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ದೀಪಕ್ ಕುಮಾರ್ ಶೆಟ್ಟಿ ರಾಜಿನಾಮೆ, ನೂತನ ಅಧ್ಯಕ್ಷರಾಗಿ ಅನಿತಾ ಆ‌ರ್.ಕೆ.ಆಯ್ಕೆ

Views: 135

ಕನ್ನಡ ಕರಾವಳಿ ಸುದ್ದಿ: ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ 5 ವರ್ಷಗಳಿಂದ ಕ್ಷೇತ್ರ ಅಧ್ಯಕ್ಷ ಜವಾಬ್ದಾರಿಯನ್ನು ನಿರ್ವಹಿಸಿದ ಅವರು ಪಕ್ಷದಲ್ಲಿ ಜಿಲ್ಲಾ ಹೊಸ ಅಧ್ಯಕ್ಷರ ಆಯ್ಕೆ ನಡೆಯಬೇಕಾಗಿರುವುದರಿಂದ ರಾಜೀನಾಮೆ ನೀಡಿದ್ದಾರೆ.ರಾಜೀನಾಮೆಯನ್ನು ಅಂಗೀಕರಿಸಿರುವ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ದೀಪಕ್ ಕುಮಾ‌ರ್ ಶೆಟ್ಟಿ ಅವರನ್ನು ಅಭಿನಂದಿಸಿದ್ದಾರೆ.

ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ ತಕ್ಷಣವೇ ಅನಿತಾ ಆ‌ರ್.ಕೆ. ಅವರನ್ನು ನೇಮಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಅನಿತಾ ಅವರ ಈ ಹಿಂದೆ ಬೈಂದೂರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು. ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ ಒಂದು ಅವಧಿಗೆ ಸೇವೆ ಸಲ್ಲಿಸಿದ್ದರು.

Related Articles

Back to top button