ಕರಾವಳಿ

ಮಂಗಳೂರಿನಲ್ಲಿ ಭೀಕರ ಅಪಘಾತ: ಇಬ್ಬರು NSUI ಮುಖಂಡರು ಸಾವು 

Views: 134

ಕನ್ನಡ ಕರಾವಳಿ ಸುದ್ದಿ: ಮಂಗಳೂರಿನ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿನಡೆದ ಭೀಕರ ರಸ್ತೆ ಅಪಘಾತದಲ್ಲಿ  NSUI ಮುಖಂಡ ಓಂ ಶ್ರೀ ಹಾಗೂ ಕದ್ರಿ‌ ನಿವಾಸಿ ಅಮನ್ ರಾವ್ ಸಾವನ್ನಪ್ಪಿದ್ದಾರೆ.

ಕಾರು ತಲಪಾಡಿಯಿಂದ ಮಂಗಳೂರಿಗೆ ಸಂಚಾರ ಮಾಡುತ್ತಿತ್ತು. ಕಾರಿನಲ್ಲಿದ್ದ ಐವರು ಯುವಕರ ಪೈಕಿ ಇಬ್ಬರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.ವಂಶಿ ಮತ್ತು ಆಶಿಕ್  ಗಂಭೀರ ಗಾಯಗಳಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಬ್ಬ ಗೆಳೆಯ ಇಟಲಿ ಮೂಲದ ಜೆರ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತ ಇಬ್ಬರು ಯುವಕರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Related Articles

Back to top button