ಇತರೆ

ಮಂಗಳೂರು:ಕಂಟೈನ‌ರ್ ಲಾರಿ ಡಿಕ್ಕಿ ಸ್ಕೂಟರ್ ಸವಾರ ಸದಾನಂದ ಶೆಟ್ಟಿಗಾರ್ ಸಾವು

Views: 366

ಕನ್ನಡ ಕರಾವಳಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ-66ರ ಮಂಗಳೂರು-ಉಡುಪಿ ರಸ್ತೆಯ ಕೂಳೂರು ವಿಆರ್‌ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತರನ್ನು ಸದಾನಂದ ಶೆಟ್ಟಿಗಾರ್ (46)ಎಂದು ಗುರುತಿಸಲಾಗಿದೆ.

ಇವರು ಸ್ಕೂಟರ್‌ನಲ್ಲಿ ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಸಂಜೆ ಸುಮಾರು 6:15 ಗಂಟೆಗೆ ಅದೇ ಮಾರ್ಗದಲ್ಲಿ ಬಂದ ಲಾರಿ ಡಿಕ್ಕಿ ಹೊಡೆದಿದೆ.ಲಾರಿ ಚಾಲಕ ನಿರ್ಲಕ್ಷ್ಯ ಹಾಗೂ ಅತಿವೇಗದಿಂದ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದ್ದು, ಡಿಕ್ಕಿಯ ಬಳಿಕ ಲಾರಿ ಸ್ಕೂಟರ್ ಸವಾರನ ಮೇಲೆಯೇ ಹರಿದಿದೆ ಎನ್ನಲಾಗಿದೆ. ಪರಿಣಾಮ ಸದಾನಂದ ಶೆಟ್ಟಿಗಾ‌ರ್ ಅವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!