ಇತರೆ

ಮದರಂಗಡಿ ಉದ್ಯಮಿ ಡೇವಿಡ್ ಹತ್ಯೆ ಆರೋಪಿ ಬೈಂದೂರು ಒತ್ತಿನೆಣೆಯಲ್ಲಿ ಬಂಧನ

Views: 103

ಕನ್ನಡ ಕರಾವಳಿ ಸುದ್ದಿ: ಜಿಲ್ಲೆಯ ಕಾಪು ಮುದುರಂಗಡಿ ಪೇಟೆಯಲ್ಲಿ ಹಾಡಹಗಲೇ ಪಿಸ್ತೂಲಿನಿಂದ ಡೇವಿಡ್‌ನನ್ನು ಕೊಲೆಗೈದ ಆರೋಪಿಗಳನ್ನು ಘಟನೆ ನಡೆದ 7 ಗಂಟೆಯೊಳಗೆ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಕಾಪು ಪಿಎಸ್ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್ಐ ಪ್ರಸನ್ನ, ಶಿರ್ವ ಪಿಎಸ್ಐ ಮಂಜುನಾಥ್ ಮರಬದ ಹಾಗೂ ಬೈಂದೂರು ಪಿಎಸ್ಐ ಮಹೇಶ್ ಅವರ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಪೋಲಿಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಕಾಪು ಪಿಎಸ್ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ಶೂಟರ್ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಆರೋಪಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡಿರುವ ಪಿಎಸ್ಐಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆ.7 ರಂದು ಮಧ್ಯಾಹ್ನ ಸುಮಾರು 3.45 ರ ವೇಳೆಗೆ ಮುದುರಂಗಡಿಯಲ್ಲಿನ ತನ್ನ ಕಚೇರಿಯಿಂದ ತೆರಳಲು ಕಾರು ಹತ್ತುತ್ತಿದ್ದ ಡೇವಿಡ್‌ನನ್ನು ಹಿಂದಿನಿಂದ ಬಂದ ಆಗಂತುಕ ಪಿಸ್ತೂಲಿನಿಂದ ತಲೆಗೆ ಹಾಗು ಎದೆಗೆ ಗುಂಡು ಹಾರಿಸಿ ಬೈಕ್‌ನಲ್ಲಿ ಇಬ್ಬರು ಪರಾರಿಯಾಗಿದ್ದರು.

ಸ್ಥಳದಲ್ಲಿ ದೊರೆತ ಸಿಸಿಟಿವಿಯನ್ನು ಆಧರಿಸಿ ಖಾಕಿ ಪಡೆ ತನಿಖೆ ನಡೆಸಿದ ಪೋಲಿಸರು ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಕಬಂಧಿ ಹಾಕಿ ತಪಾಸಣೆ ನಡೆಸುತ್ತಿದ್ದ ಪೋಲಿಸರಿಗೆ ಬಸ್‌ನಲ್ಲಿ ಮುಖವನ್ನು ಶಾಲ್‌ನ ಮೂಲಕ ಮುಚ್ಚಿಕೊಂಡಿದ್ದ ವ್ಯಕ್ತಿ ಕಂಡಿದ್ದಾರೆ. ಆತನನ್ನು ತಪಾಸಣೆಗೆ ಒಳಪಡಿಸಿದಾಗ, ಆತನ ಮೊಬೈಲ್‌ನಲ್ಲಿ ಹತ್ಯೆಯಾದ ಡೇವಿಡ್‌ನ ಪೋಟೊ ಪತ್ತೆಯಾಗಿದೆ‌. ಜೊತೆಗೆ ಆತನ ಖಾತೆಗೆ ರೂ. 50 ಸಾವಿರ ಜಮೆಯಾಗಿದೆ ಎಂದು ಹೇಳಲಾಗಿದೆ. ಮತ್ತೋರ್ವ ಆರೋಪಿ ಭಟ್ಕಳದಲ್ಲಿ ಪತ್ತೆಯಾಗಿದ್ದು ಆತನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಉತ್ತರ ಪ್ರದೇಶ ಮೂಲದವರು ಎಂದು ಮೂಲಗಳು ತಿಳಿಸಿವೆ.

Related Articles

Back to top button
error: Content is protected !!