ಸಾಮಾಜಿಕ

ಮದುವೆಯಾಗಿ ಆರೇ ತಿಂಗಳಲ್ಲಿ ಡೆತ್ ನೋಟ್ ಬರೆದಿಟ್ಟು ಭದ್ರಾ ಕಾಲುವೆಗೆ ಹಾರಿ ನವವಿವಾಹಿತೆ ಆತ್ಮಹತ್ಯೆ

Views: 92

ಕನ್ನಡ ಕರಾವಳಿ ಸುದ್ದಿ: ಮದುವೆಯಾದ ಆರೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರವಾತಿಯಲ್ಲಿ ನಡೆದಿದೆ.

ಬೆಳಗಾವಿ ಲತಾ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಭದ್ರಾವತಿಯ ಹೆಂಚಿನ ಸಿದ್ದಾಪುರ ನಿವಾಸಿಯಾಗಿರುವ ಲತಾ, ಬಿಎ, ಬಿಎಡ್ ಪದವೀಧರೆ. ಆರು ತಿಂಗಳ ಹಿಂದಷ್ಟೇ ಶಿಕಾರಿಪುರ ಮೂಲದ ಎಂಜಿನಿಯರ್ ಗುರುರಾಜ್ ಎಂಬುವವರ ಜೊತೆ ವಿವಾಹವಾಗಿತ್ತು. ಮದುವೆಯಾದ ಆರು ತಿಂಗಳೊಳಗೇ ಪತಿ ಹಾಗೂ ಅತ್ತೆ ಮನೆಯವರು ಲತಾಗೆ ಕಿರುಕುಳ, ಹಿಂಸೆ ನೀಡಲಾರಂಭಿಸಿದ್ದರಂತೆ

ಪತಿ ಹಾಗೂ ಮನೆಯವರ ಕಿರುಕುಳ, ಹಿಂಸೆಗೆ ನೊಂದು, ಡೆತ್ ನೋಟ್ ಬರೆದಿಟ್ಟು ಲತಾ, ಭದ್ರಾ ಬಲದಂಡೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button
error: Content is protected !!