ಜನಮನ
ಮುಂದಿನ ಮೂರು ದಿನ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

Views: 103
ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಹವಾಮಾನ ವೈಪರಿತ್ಯದಿಂದ ಅಕ್ಟೋಬರ್ 15ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚುರುಕು ಪಡೆದಿದ್ದು, ಕಳೆದ ಎರಡು ದಿನಗಳಿಂದ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಗುರುವಾರ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿತ್ತು. ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯ ಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದಿರುವ ಹವಾಮಾನ ಇಲಾಖೆ ಕರಾವಳಿ, ಮಲೆ ನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.