ರಾಜಕೀಯ

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ಬದಲಾವಣೆ: ಕುಮಾರಸ್ವಾಮಿ ಅಸಮಾಧಾನ 

Views: 33

ಕನ್ನಡ ಕರಾವಳಿ ಸುದ್ದಿ: ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಿದಾಕ್ಷಣ ಜನರಿಗೆ ಚಿನ್ನದ ತಗಡು ಕೊಡಿಸಲು ಸಾಧ್ಯವೇ ಎಂದು ಕೇಂದ್ರ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್‌.ಡಿ. ಕುಮಾರ ಸ್ವಾಮಿ ಲೇವಡಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರದ ಹೆಸರು ಬದಲಾವಣೆಗೆ ನಾನು ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಅದರಿಂದ ಏನೂ ಪ್ರಯೋಜನವಾಗುವುದಿಲ್ಲ ಎಂದು ಹೇಳಿದರು.

ರಾಮನಗರ ಹೆಸರಿಗೆ ಒಂದು ಇತಿಹಾಸವಿದೆ. ಅದನ್ನು ಬದಲಾವಣೆ ಮಾಡಿರುವುದಕ್ಕೆ ಹಿಂದುತ್ವ ವಿರೋಧಿಗಳ ಎಂದು ಹೇಳಲು ನಾನು ಬಯಸುವುದಿಲ್ಲ. ಹಣ ಲೂಟಿ ಹೊಡೆಯಲು ಈ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.ಬೆಂಗಳೂರು ದಕ್ಷಿಣ ಜಿಲ್ಲೆಯ ಬದಲು ವಿಶ್ವವಿಖ್ಯಾತ ವಿಧಾನಸೌಧ ಕಟ್ಟಿದ ಕೆಂಗಲ್‌ ಹನುಮಂತಯ್ಯ ಹೆಸರನ್ನು ಅವರು ನಾಮಕರಣ ಮಾಡಬಹುದಿತ್ತು. ಈ ಹಿಂದೆ ಕೆಂಗಲ್‌ ಹನುಮಂತಯ್ಯನವರು ನೆಹರು ಅವರಿಗೆ ಸೆಡ್ಡು ಹೊಡೆದು ರಾಜಕಾರಣ ಮಾಡಿದ್ದರು. ಮೂರು ಜನ ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ಜಿಲ್ಲೆಯನ್ನು 2017 ರಲ್ಲಿ ಹೊಸದಾಗಿ ಘೋಷಿಸಿದಾಗ ಏಕೆ ವಿರೋಧ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಬೆಂಗಳೂರು ಗ್ರಾಮಾಂತರ ಹೆಸರನ್ನು ಮುಂದುವರೆಸಿದ್ದೇ ನಾನು. ರಾಮನಗರ ಜಿಲ್ಲಾ ಕೇಂದ್ರ ಮಾಡಿದ್ದರಿಂದ ಜನಸಾಮಾನ್ಯರಿಗೆ ಅನುಕೂಲವಾಗಿದೆ. ಇವರ ಸರ್ಕಾರ ಶಾಶ್ವತವಾಗಿರುವುದಿಲ್ಲ. ಮುಂದಿನ ಚುನಾವಣೆಯ ಫಲಿತಾಂಶ ಏನು ಎಂದು ನನಗೆ ಗೊತ್ತಿದೆ. ಮತ್ತೆ ಹೆಸರು ಬದಲಾವಣೆಯಾಗುತ್ತದೆ ಎಂದು ಹೇಳಿದರು. ಪ್ರಮುಖವಾಗಿ ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿರುವ ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‌ ಅವರ ಟೀಕೆಗೆ ತಿರುಗೇಟು ನೀಡಿದ್ದಾರೆ.2006-07, 2007-08 ರಲ್ಲಿ ಜೆಡಿಎಸ್‌‍-ಬಿಜೆಪಿ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಹಾಗೂ 2018 ರ ಬಳಿಕ 14 ತಿಂಗಳ ಕಾಲ ಕಾಂಗ್ರೆಸ್‌‍-ಜೆಡಿಎಸ್‌‍ ಸಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ನಾನು ಮಾಡಿದ್ದ ಕೆಲಸಗಳು ಸರ್ಕಾರದ ದಾಖಲೆಗಳಲ್ಲಿವೆ

 

Related Articles

Back to top button