ಶಿಕ್ಷಣ

ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ‘ಪಥ’ ವಿದ್ಯಾರ್ಥಿ ಮಾರ್ಗದರ್ಶಿ ಕಾರ್ಯಕ್ರಮ

"ಕಲಿಕೆ ಅರ್ಥಪೂರ್ಣವಾಗಬೇಕಾದರೆ ಸಾಧಿಸುವ ಛಲದೊಂದಿಗೆ ವರ್ತಮಾನದ ಶಿಕ್ಷಣ ವ್ಯವಸ್ಥೆಗೆ ಒಗ್ಗಿಕೊಳ್ಳಬೇಕು"---ಪ್ರಕಾಶ್ ಶೆಟ್ಟಿ ನಿವೃತ್ತ ಪ್ರಾಂಶುಪಾಲರು ಜೈನ್ ಪದವಿ ಪೂರ್ವ ಕಾಲೇಜು, ಮೂಡುಬಿದರೆ

Views: 151

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ‘ಪಥ’ ಎನ್ನುವ ವಿದ್ಯಾರ್ಥಿ ಮಾರ್ಗದರ್ಶಿ ಕಾರ್ಯಕ್ರಮವನ್ನು ಜೂನ್ 2ರಂದು ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪೂರಕ ವಾತಾವರಣವನ್ನು ಸ್ಪಷ್ಟಿಸುವ ಉದ್ದೇಶವನ್ನು ಹೊಂದಿರುವ ಈ ಕಾರ್ಯಗಾರವನ್ನು ಶ್ರೀ ಪ್ರಕಾಶ್ ಶೆಟ್ಟಿ ನಿವೃತ್ತ ಪ್ರಾಂಶುಪಾಲರು ಜೈನ್ ಪದವಿ ಪೂರ್ವ ಕಾಲೇಜು, ಮೂಡುಬಿದರೆ ಇವರು ಉದ್ಘಾಟಿಸಿದರು.

ಅವರು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡುತ್ತಾ, ‘ಕಲಿಕೆಯಲ್ಲಿ ಶಿಸ್ತು ಬಹು ಮುಖ್ಯ. ಪದವಿ ಹತ್ತಿರಕ್ಕೆ ಹೆಜ್ಜೆ ಇಡುವ ನಿಮ್ಮ ಕಲಿಕೆ ಅರ್ಥಪೂರ್ಣವಾಗಬೇಕಾದರೆ ಸಾಧಿಸುವ ಛಲದೊಂದಿಗೆ ವರ್ತಮಾನದ ಶಿಕ್ಷಣ ವ್ಯವಸ್ಥೆಗೆ ಒಗ್ಗಿಕೊಳ್ಳಬೇಕು .ಆಸಕ್ತಿ ಇದ್ದರೆ ಮಾತ್ರ ಅವಕಾಶ ಬಾಚಿಕೊಳ್ಳಬಹುದೆಂದರು’.

ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಚೇರ್ಮನ್ ಶ್ರೀ ಕೆ ಸುಭಾಷ್ ಚಂದ್ರ ಶೆಟ್ಟಿ ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡುತ್ತಾ, ನಿಮ್ಮ ಕಲಿಕೆ ನಿಮ್ಮ ಭವಿಷ್ಯ ನಿರ್ಮಾಣವಾಗುವಂತೆ ಮಾಡುತ್ತದೆ.ಪರಿಶ್ರಮದ ಕಲಿಕೆ ನಿಮ್ಮದಾದರೆ ಉತ್ತಮ ಶಿಕ್ಷಣ ನೀಡುವ ಗುರಿ ನಮ್ಮದಾಗಿದೆ .ವಿದ್ಯಾರ್ಥಿಗಳ ಮನೋವಿಕಾಸಕ್ಕೆ ಬೇಕಾದ ಯೋಗಾ ,ಧ್ಯಾನ ಮುಂತಾದ ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳ ಮನಸ್ಸು ಹದಗೊಳ್ಳುತ್ತದೆ .ಮಕ್ಕಳು ತಮ್ಮನ್ನು ಅದರಲ್ಲಿ ಪರಿ ಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಕನ್ನಡ ಭಾಷಾ ಉಪನ್ಯಾಸಕ ಡಾ. ಕೃಷ್ಣರಾಜ ಕರಬ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂಖ್ಯಾಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ಪವಿತ್ರ ಶೆಟ್ಟಿ ಗಣ್ಯರನ್ನು ಸ್ವಾಗತಿಸಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ರಂಜನಿ ವಂದಿಸಿದರು.

Related Articles

Back to top button