ಯುವಜನ

ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

Views: 32

ಕನ್ನಡ ಕರಾವಳಿ ಸುದ್ದಿ: ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಭರಮಸಾಗರದ ಖಾಸಗಿ ಶಾಲೆಯಲ್ಲಿ ನಡೆದಿದೆ.

ಇಲ್ಲಿನ ವಸತಿ ಶಾಲೆಯ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದವನಾಗಿದ್ದು, ಈವರೆಗೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಕೊಟ್ರೇಶ್ 3ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಭರಮಸಾಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!