ಕರಾವಳಿ

ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ವಡ್ಡರ್ಸೆ ರಘುರಾಮ‌ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ 

Views: 0

ಕೋಟ:ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಅವರಿಗೆ ವಡ್ಡರ್ಸೆ ರಘುರಾಮ‌ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿದರು.

ಕೋಟ ಸಹಕಾರಿ ವ್ಯವಸಾಯಿಕ ಸಂಘದ ಬಿ.ಸಿ.ಹೊಳ್ಳ ಸಭಾಂಗಣದಲ್ಲಿ ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಡಿ.17ರಂದು ನಡೆದ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ನಡೆಯಿತು.

ಪತ್ರಕರ್ತ ಜೋಗಿ ಅಭಿನಂದನಾ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿಶ್ವೇಶ್ವರ ಭಟ್ ಅವರ ಕೊಡುಗೆ ಅಪಾರವಾದದ್ದು. ಈ ಕ್ಷೇತ್ರಕ್ಕೆ ಹೊಸತನ ಹಾಗೂ ನವ ಆಯಾಮ ನೀಡಿದ ಸಾಧನೆ ಇವರಿಗೆ ಸಲ್ಲಬೇಕು ಎಂದರು.

ವಿಶ್ವೇಶ್ವರ ಭಟ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ವಡ್ಡರ್ಸೆ ರಘುರಾಮ ಶೆಟ್ಟರ ಕೊಡುಗೆ ಅದ್ಬುತವಾದದ್ದು. ಬ್ರಹ್ಮಾವರ ಪತ್ರಕರ್ತ ಸಂಘ ಅವರ ಹೆಸರಲ್ಲಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ ಎಂದರು.

ಪ್ರಶಸ್ತಿ ಪ್ರದಾನ ಮಾಡಿದ ಜಯಪ್ರಕಾಶ್ ಹೆಗ್ಡೆ ಅವರು ಮಾತನಾಡಿ,  ನಿಷ್ಪಕ್ಷಪಾತ ವರದಿ ಮೂಲಕ ಪತ್ರಿಕೆಗಳು ವಾಸ್ತವಾಂಶಗಳಿಗೆ  ಹೆಚ್ಚು ಒತ್ತು ನೀಡಬೇಕು  ಎಂದರು.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸಿದರು.

ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು.

ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಯಶಪಾಲ್ ಸುವರ್ಣ, ಕೋಟ ಶ್ರೀನಿವಾಸ ಪೂಜಾರಿ, ಕೋಟ ಸಿ.ಎ ಬ್ಯಾಂಕ್ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ ಶೆಟ್ಟಿ ಅಲೆವೂರು, ರಜತ ಮಹೋತ್ಸವ. ಸಮಿತಿಯ ಅಧ್ಯಕ್ಷ ಮಹಮ್ಮದ್ ಶರೀಫ್, ಬೈಂದೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಂದುಕಾ ಎ.ಎಸ್, ಹೆಬ್ರಿಯ ಸುಕುಮಾರ್ ಮುನಿಯಾಲು, ಕುಂದಾಪುರದ ನಾಗರಾಜ್ ರಾಯಪ್ಪನಮಠ ಇನ್ನಿತರರು ಇದ್ದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಪತ್ರಕರ್ತರಾದ ಶೇಖರ್ ಅಜೆಕಾರು ಮತ್ತು ಶಶಿಧರ ಹೆಮ್ಮಣ್ಣ ಅವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು.ಶೇಖರ ಅಜೆಕಾರು ಕುಟುಂಬದವರಿಗೆ ಆರ್ಥಿಕ ಧನಸಹಾಯ ನೀಡಲಾಯಿತು.ಶಿವಾನಂದ ತಗಡೂರು ಮತ್ತು ಜೋಗಿ ಅವರನ್ನು ಗೌರವಿಸಲಾಯಿತು.ತಾಲೂಕು ಪತ್ರಕರ್ತರ ಸಂಘದ ಗೌರವಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಸ್ವಾಗತಿಸಿದರು. ಸಂಚಾಲಕ ವಸಂತ ಗಿಳಿಯಾರ್ ಪ್ರಾಸ್ತಾವಿಕವಾಗಿ‌ ಮಾತನಾಡಿದರು. ಉಪಾಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಹರೀಶ ಕಿರಣ್ ಕುಮಾರ್ ತುಂಗ ವಂದಿಸಿದರು.

Related Articles

Back to top button