ಶಿಕ್ಷಣ
ವಿಶ್ವ ಪ್ರಜಾಪ್ರಭುತ್ವ ದಿನದಂದು ಮಾನವ ಸರಪಳಿ ಜಾಥಾದಲ್ಲಿ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು

Views: 876
ಕುಂದಾಪುರ: ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಮಾನತೆ, ಐಕ್ಯತೆ, ಸಾಮರಸ್ಯ, ಸಾಮಾಜಿಕ ನ್ಯಾಯವನ್ನು ಬಿಂಬಿಸುವ ಸಲುವಾಗಿ ಶಂಕರನಾರಾಯಣ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಕುಂದಾಪುರದಲ್ಲಿ ಮಾನವ ಸರಪಳಿ ಜಾಥಾದಲ್ಲಿ ಪಾಲ್ಗೊಂಡರು.
ಇಂದು ರಾಷ್ಟೀಯ ಹೆದ್ದಾರಿ -66ರ ಆರಾಟೆ ಬ್ರಿಡ್ಜ್ ಹತ್ತಿರ ನಡೆದ ಮಾನವ ಸರಪಳಿ ಜಾಥಾದಲ್ಲಿ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ 130ವಿದ್ಯಾರ್ಥಿಗಳು ಮತ್ತು ಸಿಬ್ಬಂದಿವರ್ಗ ಭಾಗವಹಿಸಿ ಸಾಮೂಹಿಕವಾಗಿ ಸಂವಿಧಾನದ ಪ್ರಸ್ತಾವನೆಯನ್ನು ಓದಿದರು.