ಶಂಕರನಾರಾಯಣ:ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಅದ್ಧೂರಿ ಸಂಭ್ರಮ

Views: 30
ಶಂಕರನಾರಾಯಣ : ಇಲ್ಲಿನ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಪ್ರವರ್ತಿತ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ಮತ್ತು ಮದರ್ ತೆರೇಸಾ ಪಿ ಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಜ್ಯೋತಿ ಕೆ ಸಿ ಧ್ವಜಾರೋಹಣ ನೆರವೇರಿಸಿದರು.ಅವರು ಮಾತನಾಡಿ, ಹುತಾತ್ಮರಾದ ವೀರ ದೇಶ ಭಕ್ತ ಸ್ವಾತಂತ್ರ್ಯ ಹೋರಾಟಗಾರರನ್ನು ಕೇವಲ ಈ ದಿನ ಸ್ಮರಿಸದೇ ಅವರ ಆದರ್ಶ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಪ್ರಗತಿಗೆ ಎಲ್ಲರೂ ಕೈ ಜೋಡಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಸಂದೇಶ ನೀಡಿದರು.ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಅರಿವು ಮತ್ತು ಅಗತ್ಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್, ಎಮರಾಲ್ಡ್, ಸಪಾಯರ್, ರೂಬಿ, ಟೋಪಾಜ್ ತಂಡಗಳಿಂದ ಆಕರ್ಷಕ ಪಥಸಂಚಲನ ವೀಕ್ಷಿಸಿದರು ಸಂಸ್ಥೆಯ ಆಡಳಿತಾಧಿಕಾರಿಗಳಾದ ಕುಮಾರಿ ಶಮಿತಾ ರಾವ್ ಮತ್ತು ಕುಮಾರಿ ರೆನಿಟಾ ಲೋಬೊ ಸರ್ವರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು. ಉಪಪ್ರಾಂಶುಪಾಲ ಮಂಜುನಾಥ್ ಬೈರಿ, ವಿಜ್ಞಾನ ವಿಭಾಗದ ಮುಖ್ಯಸ್ಥೆ ನಿರ್ಮಲಾ ಕುತ್ಯಾಡಿ,ಬೋಧಕ ಮತ್ತು ಬೋಧಕೇತರ ವರ್ಗ, ವಿದ್ಯಾರ್ಥಿ ಪ್ರತಿನಿದಿಗಳು, ಮತ್ತು ಪಾಲಕರು ಉಪಸ್ಥಿತರಿದ್ದರು
ಶಿಕ್ಷಕಿ ಚೈತ್ರಾ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಗೀತಾ ವಂದಿಸಿದರು. ಶಿಕ್ಷಕಿ ಅವಿನಾ ಡಿಸೋಜಾ ನಿರೂಪಿಸಿದರು.
ನಂತರ ವಿದ್ಯಾರ್ಥಿಗಳಿಂದ ಏಕಪಾತ್ರಾಭಿನಯ, ವೈವಿಧ್ಯಮಯ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳಿಗೆ ಶಂಕರನಾರಾಯಣ ಗ್ರಾಮಪಂಚಾಯಿತಿ ವತಿಯಿಂದ ನೀಡಿದ ಸಿಹಿ ವಿತರಿಸಲಾಯಿತು.