ಸಾಂಸ್ಕೃತಿಕ

ಶತಾವಧಾನಿ ಆರ್.ಗಣೇಶ್‌ಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ

Views: 22

ಕನ್ನಡ ಕರಾವಳಿ ಸುದ್ದಿ: ಯಕ್ಷಗಾನ ಕಲಾರಂಗವು ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ವಿದ್ವಾಂಸರಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಶತಾವಧಾನಿ ಆರ್. ಗಣೇಶ್ ಆಯ್ಕೆಯಾಗಿದ್ದಾರೆ.

ನಾಡಿನ ಹಿರಿಯ ವಿದ್ವಾಂಸ, ಬಹುಭಾಷಾ ವಿಶಾರದ, ಏಕವ್ಯಕ್ತಿ ಯಕ್ಷಗಾನದ ಹರಿಕಾರ, ಹಲವು ಶ್ರೇಷ್ಠ ಗ್ರಂಥಗಳನ್ನು ಸಾರಸ್ವತ ಲೋಕಕ್ಕೆ ನೀಡಿ ಗೌರವಕ್ಕೆ ಶತಾವಧಾನಿ ಡಾ. ಆರ್. ಗಣೇಶ್ ಭಾಜನರಾಗಿದ್ದಾರೆ.

ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ಈ ಪ್ರಶಸ್ತಿಯು ₹60 ಸಾವಿರ ನಗದು ಒಳಗೊಂಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 4 ರಂದು ಸಂಜೆ 4 ಗಂಟೆಗೆ ಸಂಸ್ಥೆಯ ಐ.ವೈ.ಸಿ ಸಭಾಂಗಣದಲ್ಲಿ ಜರುಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button