ಕರಾವಳಿ

ಸುರತ್ಕಲ್:ನಾಪತ್ತೆಯಾಗಿದ್ದ  ಖಾಸಗಿ ಶಾಲೆಯ ನಾಲ್ವರು ವಿದ್ಯಾರ್ಥಿಗಳ ಶವ ನದಿಯಲ್ಲಿ ಪತ್ತೆ 

Views: 178

ಮಂಗಳೂರು: ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ನ ನಾಲ್ವರು ವಿದ್ಯಾರ್ಥಿಗಳ ಶವಗಳು ಹಳೆಯಂಗಡಿಯ ಕೊಪ್ಪಳ ಅಣೆಕಟ್ಟ ರೈಲ್ವೇ ಸೇತುವೆಯ ಕೆಳಭಾಗದ ನದಿಯಲ್ಲಿ ಪತ್ತೆಯಾಗಿವೆ.

ಸುರತ್ಕಲ್ ಅಗರಮೇಲು ನಿವಾಸಿ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ರಾಘವೇಂದ್ರ (15), ಗುಡ್ಡಕೊಪ್ಪ ನಿವಾಸಿ ನಿರೂಪ (15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ ಪುತ್ರ ಅನ್ವಿತ್ (15) ಮೃತಪಟ್ಟವರು.

ಬೇಸಿಗೆ ರಜೆಯಲ್ಲಿ ಕಾವೇರಿ ನಾಲೆಗೆ ಈಜಲು ತೆರಳಿದ್ದ ಬೆಂಗಳೂರು ಮೂಲದ ಐವರು ನೀರುಪಾಲು

ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ವಿದ್ಯಾರ್ಥಿಗಳಾಗಿದ್ದ ಇವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳವಾರ ನಡೆದ ಇಂಗ್ಲೀಷ್ ಪ್ರಿಪೆಟರಿ ಪರೀಕ್ಷೆ ಬರೆದು ಮನೆಗೆ ಬಾರದೆ ಕಾಣೆಯಾಗಿದ್ದರು. ಒಟ್ಟು 9 ಮಂದಿ ವಿದ್ಯಾರ್ಥಿಗಳು ಈಜಲು ತೆರಳಿದ್ದು, ಇವರಲ್ಲಿ ನಾಲ್ಕು ಮಂದಿ ಈಜಾಡುವ ವೇಳೆ ನೀರು ಪಾಲಾಗಿದ್ದರು.

ನಾಲ್ವರು ಬಾಲಕರು ಸುರತ್ಕಲ್ ಮಾರುಕಟ್ಟೆ ಬಳಿ ಅವಿಲ್ ಮಿಲ್ಕ್ ಕುಡಿದು ಬಳಿಕ ರಿಕ್ಷಾ ಪಾರ್ಕಿಂಗ್ ಬಳಿ ಬಂದಿದ್ದಾರೆ. ಆ ನಂತರ ಹಳೆಯಂಗಡಿ ಬಳಿ ತೆರಳಿದ್ದರು. 9 ಮಂದಿ ಕೂಡಾ ತೆರಳಿದ್ದು, ಇವರಲ್ಲಿ ನಾಲ್ವರು ಬಾಲಕರು ನಾಪತ್ತೆ ಹಿನ್ನಲೆಯಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು.

Related Articles

Back to top button
error: Content is protected !!