ಹೋಟೆಲ್ ಉದ್ಯಮಿ ಸುರೇಶ್ ಪೂಜಾರಿ ಪಡುಕೋಣೆ ನಿಧನ

Views: 110
ಕನ್ನಡ ಕರಾವಳಿ ಸುದ್ದಿ: ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್ ಪೂಜಾರಿ(87) ಜೂನ್ 4 ರಂದು ಸಂಜೆ 7:40 ಕ್ಕೆ ಮುಂಬೈಯ ಸ್ವಗೃಹದಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.
ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ
ಶ್ರೀಯುತರು ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರದ ಗೌರವಾಧ್ಯಕ್ಷರು.ಶ್ರೀ ನಾರಾಯಣಗುರು ಏಜ್ಯುಕೇಶನಲ್&ಕಲ್ಚರಲ್ ಟ್ರಸ್ಟ್ (ರಿ) ಕುಂದಾಪುರದ ಅಧ್ಯಕ್ಷರಾಗಿ ಕಳೆದ 35 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದರು. ಸಮಾಜದ ಅಶಕ್ತರು ಕೂಡ ಅತ್ಯುತ್ತಮವಾದ ಕಲ್ಯಾಣ ಮಂಟಪದಲ್ಲಿ ವಿವಾಹವನ್ನು ನಡೆಸಬೇಕು ಎಂದು 35 ವರ್ಷಗಳ ಹಿಂದೆಯೇ ಕುಂದಾಪುರದಲ್ಲಿ ಶ್ರೀ ನಾರಾಯಣಗುರು ಕಲ್ಯಾಣ ಮಂಟಪವನ್ನು ನಿರ್ಮಿಸಿ ಬಡವರ ಬಾಳಿನ ಬೆಳಕಾಗಿದ್ದರು, ವಿಧ್ಯೆಗೆ ಬಹಳಷ್ಟು ಒತ್ತು ನೀಡಿದ್ದ ಅವರು ಬಿಲ್ಲವ ಸಂಘದ ಮೂಲಕ ವಿಧ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಶ್ರೀಯುತರ ನಿಧನ ತುಂಬಲಾರದ ನಷ್ಟ ಉಂಟಾಗಿದೆ. ಬಿಲ್ಲವ ಸಮಾಜದ ಮಕ್ಕಳು ಮಾತ್ರವಲ್ಲದೆ ಹುಟ್ಟೂರು ಪಡುಕೋಣೆಯಲ್ಲಿ ಮಕ್ಕಳಿಗೆ ಶೈಕ್ಷಣಿಕ ನೆರವನ್ನು ನೀಡಿದ್ದರು .
ಇಂದು ಹುಟ್ಟೂರು ಹುಡುಕೋಣೆಗೆ ಪಾರ್ಥಿವ ಶರೀರ ಆಗಮಿಸಲಿದ್ದು, ಅಪರಾಹ್ನ 12:30 ರಿಂದ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಇದೆ ಎಂದು ಕುಟುಂಬ ಮೂಲಗಳು ತಿಳಿಸಿವೆ