ಜನಮನ

1.5 ಲಕ್ಷ ರೂ ಸ್ವೀಕರಿಸುವಾಗ ಶಿರಸ್ತೇದಾರ್ ಲೋಕಾಯುಕ್ತ ಬಲೆಗೆ

Views: 0

ಶಿವಮೊಗ್ಗ ತಾಲೂಕು ಕಚೇರಿ ಕಟ್ಟಡದಲ್ಲಿರುವ ಶಿರಸ್ತೇದಾರ್ ಕಚೇರಿಗೆ ಲೋಕಾಯುಕ್ತ ದಾಳಿ ನಡೆದಿದೆ. ಈ ವೇಳೆ ಒಂದೂವರೆ ಲಕ್ಷ ರೂಪಾಯಿ ಹಣ ಸ್ವೀಕರಿಸುವಾಗ ಶಿರಸ್ತೇದಾರ್ ಅವರು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ಹನುಮಂತ ಬನ್ನಿ ಕೊಡ ಎಂಬುವರಿಗೆ ಸಂಬಂಧಿಸಿದ ಖಾತೆ ಬದಲಾವಣೆಗೆ ಅರುಣ್ ಕುಮಾರ್ ಮೂರು ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಎಂದು ಆರೋಪಿಸಲಾಗಿದೆ. ಈ ದಿನ ಒಂದೂವರೆ ಲಕ್ಷ ರೂಪಾಯಿ ಹಣ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.

ಶಿರಸ್ತೇದಾರ್ ಅರುಣ್ ಕುಮಾರ್ ಕಂದಾಯ ಇಲಾಖೆ ನೌಕರ ಸಂಘದ ಜಿಲ್ಲಾಧ್ಯಕ್ಷರಾಗಿದ್ದರು. ಲೋಕಾಯುಕ್ತ ಚಿತ್ರದುರ್ಗ ಎಸ್ಪಿ ವಾಸುದೇವ, ಶಿವಮೊಗ್ಗ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯಕ್ ನೇತೃತ್ವದಲ್ಲಿ ದಾಳಿ ನಡೆದಿದೆ.

Related Articles

Back to top button
error: Content is protected !!