ಇತರೆ

ಶಿರೂರು ಟೋಲ್ ಗೇಟ್‌ಗೆ ಅಂಬುಲೈನ್ಸ್ ಡಿಕ್ಕಿ: ಸಿಬ್ಬಂದಿ ಸಾವು

Views: 261

ಕನ್ನಡ ಕರಾವಳಿ ಸುದ್ದಿ: ಶಿರೂರು ಟೋಲ್‌ಗೇಟ್ ಒಂದಕ್ಕೆ ಅಂಬುಲೈನ್ಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟೋಲ್ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಟೋಲ್ ಗೇಟ್ ಸಿಬ್ಬಂದಿ ಮಹಾರಾಷ್ಟ್ರ ಮೂಲದ ಸಂದೀಪ್ ಚಾಲಸೇ ಸೂರ್ಯವಂಶಿ (35)  ಮೃತಪಟ್ಟವರು.

ಬೈಂದೂರು ಕಡೆಯಿಂದ ಭಟ್ಕಳ ಕಡೆಗೆ ಅತೀ ವೇಗದಿಂದ ಬಂದ ಅಂಬುಲೈನ್ಸ್ ಚಾಲಕನ ಅಜಾಗರೂಕತೆಯಿಂದ ಟೋಲ್ ಗೇಟನ ಎ1 ಲೈನ್ ಬದಿಯಲ್ಲಿ ನಿಂತಿದ್ದ ಸಿಬ್ಬಂದಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸಂದೀಪ್‌ ಚಾಲಸೇ ಸೂರ್ಯವಂಶಿ ಗಂಭೀರ ಗಾಯಗೊಂಡಿದ್ದು ಕೂಡಲೇ ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರರಕ್ತಸ್ರಾವ ಮತ್ತು ಗಂಭೀರ ಗಾಯಗೊಂಡಿರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಸಂದೀಪ್ 10 ದಿನಗಳ ರಜೆ ಪಡೆದು ರವಿವಾರ ಹುಟ್ಟೂರು ಮಹಾರಾಷ್ಟ್ರಕ್ಕೆ ಹೋಗಲು ಸಿದ್ಧತೆ ನಡೆಸಿದ್ದರು.ಪತ್ನಿಯನ್ನು ಮೊದಲೇ ಊರಿಗೆ ಕಳಿಸಿದ್ದರು.

Related Articles

Back to top button
error: Content is protected !!