ವಿವಿಯಲ್ಲಿ ಪಿಎಚ್ಡಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ :ಪ್ರೊಫೆಸರ್ ಮೇಲೆ ಶಿಸ್ತು ಕ್ರಮಕ್ಕೆ ವಿದ್ಯಾರ್ಥಿಗಳಿಂದ ಆಗ್ರಹ
Views: 87
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಪಿಎಚ್ಡಿ ವಿದ್ಯಾರ್ಥಿನಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಬಿಟ್ಟು ಹೋದ ಬಳಿಕವೂ ಆಕೆಯ ಬೆನ್ನು ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ.
ಈ ಕಾಮುಕ ಪ್ರೊಫೆಸರ್ ಹೆಸರು ದೇವರಾಜ ತಂಗುದೊರೈ ಈತ ಸಸ್ಯಶಾಸ್ತ್ರ ವಿಭಾಗದ ಪ್ರೊಫೆಸರ್. ಹುಡುಗಿಯರ ಚಪಲ ಇರೋ ಈತ ತನ್ನ ಬಳಿ ಪಿಎಚ್ಡಿ ಮಾಡಲು ಬಂದಿದ್ದ ವಿಜಯಪುರ ಮೂಲದ ವಿದ್ಯಾರ್ಥಿನಿಯೋರ್ವಳನ್ನು ಹೇಗೋ ಪಟಾಯಿಸಿದ್ದಾನೆ. ಆಕೆಯೊಂದಿಗೆ ಕಳೆದ ಕೆಲ ವರ್ಷಗಳಿಂದ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದಾನೆ. ಈ ವಿಷಯ ಆಕೆಯ ಮನೆಯವರಿಗೆ ಗೊತ್ತಾಗ್ತಿದ್ದಂತೆ ಅರ್ಧಕ್ಕೆ ಪಿಎಚ್ಡಿ ನಿಲ್ಲಿಸಿ ಮನೆಗೆ ಕರೆದುಕೊಂಡು ಹೋಗಿದ್ದಾರೆ
ಇದರಿಂದ ಪ್ರೊ.ದೇವರಾಜ್ ಸೈಕೋ ರೀತಿ ಆಗಿದ್ದ. ಬಳಿಕ ವಿಜಯಪುರ ಮೂಲದ ವೇದವ್ಯಾಸ್ ಚೌಹಾಣ್ ಎಂಬುವವರು ಆತನ ಬಳಿ ಪಿಎಚ್ಡಿ ಗೈಡ್ ಪಡೆಯಲು ಹೋಗಿದ್ದರು. ಮೊದಮೊದಲು ವೇದವ್ಯಾಸ್ಗೆ ಗೈಡ್ ಮಾಡಿರುವ ಪ್ರೊ.ದೇವರಾಜ್, ಪಿಎಚ್ಡಿ ಮುಗಿಯುವ ಹಂತ ಬಂದಾಗ ತನ್ನನ್ನು ಬಿಟ್ಟು ಹೋದ ಆ ವಿದ್ಯಾರ್ಥಿನಿಯನ್ನು ಮರಳಿ ಕರೆಯಿಸುವಂತೆ ವೇದವ್ಯಾಸ್ಗೆ ಕಿರುಕುಳ ನೀಡಿದ್ದಾನೆ. ಅಲ್ಲದೆ ಆಕೆಯನ್ನು ಮರಳಿ ಕರೆಸಿದರೆ ಮಾತ್ರ ಪಿಎಚ್ಡಿ ಪೂರ್ಣ ಮಾಡಿಕೊಡುತ್ತೇನೆ. ಇಲ್ಲದಿದ್ರೆ ಇಲ್ಲ ಎಂದು ವೇದವ್ಯಾಸ್ಗೆ ಒತ್ತಾಯ ಮಾಡಿದ್ದಾನೆ.
ಇದರಿಂದ ಕಂಗಾಲಾದ ವೇದವ್ಯಾಸ್ ಅವರು ಕುಲಸಚಿವರಿಗೆ ಹಾಗೂ ವಿದ್ಯಾರ್ಥಿ ಸಂಘಟನೆಯವರಿಗೆ ದೂರು ನೀಡಿದ್ದಾರೆ. ಅಲ್ಲದೇ ಆ ವಿದ್ಯಾರ್ಥಿನಿ ಜೊತೆಗೆ ತಾನು ಹೇಗಿದ್ದ ಎಂಬುದರ ಕುರಿತಾಗಿಯೂ ವೇದವ್ಯಾಸ್ಗೆ ಪ್ರೊ.ದೇವರಾಜ ವಿವರಣೆ ನೀಡಿದ್ದಾನೆ. ಅಲ್ಲದೆ ಆಕೆಯೊಂದಿಗೆ ತೆಗೆಸಿಕೊಂಡಿದ್ದ ಕೆಲ ಫೋಟೋಗಳನ್ನ ತನ್ನ ಇನ್ಸ್ಟಾಗ್ರಾಮ್ನಲ್ಲೂ ಹಾಕಿಕೊಂಡಿದ್ದಾನೆ.ಪ್ರೊಫೆಸರ್ ಮೇಲೆ ಶಿಸ್ತು ಕ್ರಮ ಆಗಬೇಕು. ಆತನನ್ನ ಅಮಾನತು ಮಾಡಿ ಪೊಲೀಸ್ ದೂರು ದಾಖಲಿಸಬೇಕು ಎಂದು ಕವಿವಿ ವಿದ್ಯಾರ್ಥಿ ಸಂಘಟನೆಯವರು ಆಗ್ರಹಿಸಿದ್ದಾರೆ.






