ಲೋಕಸಭೆ ಚುನಾವಣೆಗೆ ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿಗಳ್ಯಾರು? ಇಲ್ಲಿದೆ ಸಂಭವನೀಯ ಪಟ್ಟಿ

Views: 1
ಬೆಂಗಳೂರು, : ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಲೋಕ ಸಮರದಲ್ಲಿ ಕಾಂಗ್ರೆಸ್ ಗೆ ಸೋಲಿನ ರುಚಿ ತೋರಿಸಲು ಕಾಂಗ್ರೆಸ್ ಮುಂಬರುವ ಲೋಕಸಭೆ ಚುನಾವಣೆ ತಯಾರಿ ಚುರುಕುಗೊಳಿಸಿದೆ.
ಇಂದಿನಿಂದ (ಮಂಗಳವಾರ) ಮೂರು ದಿನ ದೆಹಲಿಯಲ್ಲಿ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ, ಚುನಾವಣೆ ಎದುರಿಸಲು ಅನುಸರಿಸಬೇಕಾದ ಕಾರ್ಯತಂತ್ರಗಳು, ನಾಯಕರ ಸಮನ್ವಯತೆ ಕುರಿತು ಚರ್ಚೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ ತೆರಳಿದ್ದಾರೆ
ರಾಜ್ಯ ಕಾಂಗ್ರೆಸ್ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ನೀಡಿದೆ. ಹೀಗಾಗಿ ಕೈ ನಾಯಕರು ತಯಾರಿ ನಡೆಸಿದ್ದು, ಪ್ರತಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಗೆ ಸಂಭಾವ್ಯ ಅಭ್ಯರ್ಥಿ ಪಟ್ಟಿ ರೆಡಿ ಮಾಡಲಾಗಿದೆ. ಇನ್ನೂ ಕೆಲವು ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳ ಕೊರತೆ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಸಂಭವನೀಯ ಅಭ್ಯರ್ಥಿ ಪಟ್ಟಿಯೊಂದಿಗೆ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿದೆ ತೆರಳಿದ್ದಾರೆ ಎನ್ನಲಾಗಿದೆ.
ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿ ಇಲ್ಲಿದೆ
ಚಾಮರಾಜನಗರ: ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಥವಾ ಪುತ್ರ ಸುನೀಲ್ ಬೋಸ್
ಮೈಸೂರು-ಕೊಡಗು : ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ
ಹಾಸನ : ಮಾಜಿ ಸಚಿವ ಬಿ.ಶಿವರಾಂ
ಮಂಗಳೂರು : ಮಿಥುನ್ ರೈ
ಉಡುಪಿ-ಚಿಕ್ಕಮಗಳೂರು : ಜಯಪ್ರಕಾಶ ಹೆಗ್ಡೆ
ಶಿವಮೊಗ್ಗ : ನಟ ಶಿವರಾಜಕುಮಾರ್ ಪತ್ನಿ ಗೀತಾ ಶಿವರಾಜಕುಮಾರ್
ದಾವಣಗೆರೆ: ಸಚಿವ ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ
ಚಿತ್ರದುರ್ಗ: ಎಚ್.ಆಂಜನೇಯ
ತುಮಕೂರು: ಸಚಿವ ರಾಜಣ್ಣ
ಚಿಕ್ಕಬಳ್ಳಾಪುರ: ವೀರಪ್ಪಮೊಯಿಲಿ
ಬೆಂಗಳೂರು ಗ್ರಾಮಾಂತರ: ಹಾಲಿ ಸದಸ್ಯ ಡಿ.ಕೆ.ಸುರೇಶ್
ಬೆಂಗಳೂರು ಉತ್ತರ : ಸಚಿವ ಕೃಷ್ಣಬೈರೇಗೌಡ
ಬೆಂಗಳೂರು ದಕ್ಷಿಣ :- ಸೌಮ್ಯ ರೆಡ್ಡಿ
ಬೆಂಗಳೂರು ಕೇಂದ್ರ: ಸಚಿವ ಕೆ.ಜೆ.ಜಾರ್ಜ್, ಬಿ ಕೆ ಹರಿಪ್ರಸಾದ್
ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್
ಹಾವೇರಿ- ಗದಗ : ಮಾಜಿ ಶಾಸಕ ಡಿ.ಆರ್.ಪಾಟೀಲ್, ಸಲ್ಲಿಂ ಅಹಮದ್
ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ
ಚಿಕ್ಕೋಡಿ: ಮಾಜಿ ಶಾಸಕ ವಿವೇಕ ಪಾಟೀಲ್
ವಿಜಯಪುರ: ಮಾಜಿ ಶಾಸಕ ರಾಜು ಆಲಗೂರ
ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಬೀದರ್: ಮಾಜಿ ಶಾಸಕ ರಾಜಶೇಖರ ಪಾಟೀಲ್
ಬಳ್ಳಾರಿ: ವಿ.ಎಸ್.ಉಗ್ರಪ್ಪ
ಬಾಗಲಕೋಟೆ: ವೀಣಾ ಕಾಶಪ್ಪನವರ್
ಉತ್ತರ ಕನ್ನಡ : ಅಂಜಲಿ ನಿಂಬಾಲ್ಕರ್ ,
ಕೋಲಾರ: ಕೆ.ಎಚ್ ಮುನಿಯಪ್ಪ
ರಾಯಚೂರು : ಬಿವಿ ನಾಯಕ್
ದಕ್ಷಿಣ ಕನ್ನಡ: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ
ಮಂಡ್ಯ : ಚಲುವರಾಯ ಸ್ವಾಮಿ , ಅಥವಾ ಚಲುವರಾಯ ಸ್ವಾಮಿ ಪತ್ನಿ
ಚಿಕ್ಕೋಡಿ: ಪ್ರಕಾಶ್ ಹುಕ್ಕೇರಿ , ಗಣೇಶ್ ಹುಕ್ಕೇರಿ
ಹಾಸನ : ಗೋಪಾಲ ಕೃಷ್ಣ






