ಧಾರ್ಮಿಕ
ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಕರ್ಣಾಟಕ ಬ್ಯಾಂಕ್ ಸಿಇಒ ಬೇಟಿ

Views: 413

ಕುಂದಾಪುರ: ಕರ್ಣಾಟಕ ಬ್ಯಾಂಕಿನ ನೂತನ ಸಿಇಒ ಹಾಗೂ ಎಂಡಿ ಶ್ರೀ ಕೃಷ್ಣನ್ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಜ.8 ರಂದು ಮೊದಲ ಬಾರಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ದೇವಸ್ಥಾನದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು.

ದೇವಳದ ಆಡಳಿತ ಧರ್ಮದರ್ಶಿ ಶ್ರೀ ಕೆ.ರಮಣ ಉಪಾಧ್ಯಾಯ, ಶ್ರೀ ಕೆ.ನಿರಂಜನ ಉಪಾಧ್ಯಾಯ, ಶ್ರೀ ಕೆ. ವಿಠಲ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಶ್ರೀಶ ಉಪಾಧ್ಯಾಯ, ಮ್ಯಾನೇಜರ್ ನಟೇಶ್ ಕಾರಂತ್, ಹಾಗೂ ದೇವಳದ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗದವರು, ಅರ್ಚಕರು ಉಪಸ್ಥಿತರಿದ್ದರು.







