ಮಂಡ್ಯದಲ್ಲಿ ಕುಮಾರಸ್ವಾಮಿ ಪರ ಪ್ರಚಾರಕ್ಕೆ ಸುಮಲತಾ ದೂರ ಸರಿದಿದ್ದು ದಳಪತಿಗಳಿಗೆ ಶಾಕ್!

Views: 60
ಮೈಸೂರು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಕುಮಾರಸ್ವಾಮಿ ಪರ ಪ್ರಚಾರ ಮಾಡದೇ ದೂರ ಉಳಿದಿದ್ದು, ಸುಮಲತಾ ಅಂಬರೀಶ್ ಅವರು ಮೈಸೂರು-ಕೊಡುಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಪ್ರಚಾರ ನಡೆಸಿದ್ದು, ದಳಪತಿಗಳಿಗೆ ಶಾಕ್ ನೀಡಿದೆ.
ಶನಿವಾರ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಮಂಡ್ಯ ಹಾಲಿ ಸಂಸದೆ ಸುಮಲತಾ ಅವರು, ಯದುವೀರ್ ಅವರ ಪರವಾಗಿ ಅಬ್ಬರ ಪ್ರಚಾರ ನಡೆಸಿದ್ದಾರೆ. ಯದುವೀರ್ ಒಡೆಯರ್ ಅವರು ತುಂಬ ಸರಳ ವ್ಯಕ್ತಿ, ನಿಮ್ಮೆಲ್ಲರ ಸೇವೆ ಮಾಡಲು ಬಂದಿದ್ದಾರೆ. ಹೀಗಾಗಿ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ ಎಂದು ಮೈಸೂರು ಜನತೆಯಲ್ಲಿ ಮನವಿ ಮಾಡಿದ್ದಾರೆ
ಮೈಸೂರಿನ ಕೆ.ಆರ್ ಕ್ಷೇತ್ರದಲ್ಲಿ ನಡೆದ ನಾರಿಶಕ್ತಿ ಸಮಾವೇಶದಲ್ಲಿ ಸುಮಲತಾ ಅಂಬರೀಶ್ ಅವರು ಮಾತನಾಡಿ, ನಾನು ಮಂಡ್ಯದಲ್ಲಿ ಸ್ಪರ್ಧೆ ಮಾಡಿದ್ದಾಗ ನನ್ನ ನೆರೆವಿಗೆ ನಿಂತದ್ದೇ ನನ್ನ ಮಹಿಳೆಯರು. ಮೈಸೂರು ಅಂದರೆ ನಮಗೆ ಅವಿನಾಭಾವ ಸಂಬಂಧ ಇದೆ. ಅಂಬರೀಶ್ ಅವರು ಓದಿದ್ದು, ಬೆಳೆದಿದ್ದು ಇಲ್ಲಿಯೇ. ನಾವು ಇಲ್ಲಿ ಹಲವಾರು ಸಿನಿಮಾ ಚಿತ್ರೀಕರಣಕ್ಕೆ ಬರುತ್ತಿದ್ದೆವು. ಈ ಸುಂದರ, ಸಾಂಸ್ಕೃತಿಕ ನಗರ ಹೇಗೆ ಆಯ್ತು. ಇದು ಸ್ವಾತಂತ್ರ್ಯ ಪೂರ್ವದಲ್ಲೇ ಅಭಿವೃದ್ಧಿ ಹೊಂದಿದ ನಗರ ಇದಕ್ಕೆ ಯಾರು ಕಾರಣ, ಆಧುನಿಕ ನಗರ ನಿರ್ಮಾಣಕ್ಕೆ ಮೈಸೂರು ಮಹಾರಾಜರ ಕೊಡುಗೆ ಅಪಾರ ಎಂದು ಹೇಳಿದರು
ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮೈಸೂರಿನ ಅಭಿವೃದ್ಧಿಗೆ ಹಲವಾರು ಯೋಜನೆ ತಂದಿದ್ದಾರೆ. ಮುಂದಿನ 25 ವರ್ಷಗಳ ಅವಧಿಯಲ್ಲಿ ಭಾರತವನ್ನ ಪ್ರಪಂಚದ ನಂಬರ್ 1 ಮಟ್ಟಕ್ಕೆ ತೆಗೆದುಕೊಂಡು ಹೋಗುವ ಕನಸು ಹೊಂದಿರುವ ಮೋದಿಯವರ ಕೈ ಬಲಪಡಿಸಲು ನಾವೆಲ್ಲಾ ಶ್ರಮವಹಿಸಬೇಕಾಗಿದೆ
ಯದುವೀರ್ ಒಬ್ಬ ಯುವಕ, ವಿದ್ಯಾವಂತರಾಗಿದ್ದಾರೆ. ಅವರಿಗೆ ರಾಜಕೀಯಕ್ಕೆ ಬರುವ ಅನಿವಾರ್ಯತೆ ಇಲ್ಲ. ನಿಮ್ಮೆಲ್ಲರ ಸೇವೆ ಮಾಡಲು ಬಂದಿದ್ದಾರೆ. ಅವರನ್ನ ಗೆಲ್ಲಿಸಿಕೊಂಡು ಬರುವ ಮೂಲಕ ಮೈಸೂರು ಮಹಾರಾಜರ ಋಣ ತೀರಿಸಿಕೊಳ್ಳುವ ಅವಕಾಶ ನಿಮಗೆ ಬಂದಿದೆ. ಮೈಸೂರು, ಮಂಡ್ಯ,ಚಾಮರಾಜನಗರ, ಬೆಂಗಳೂರು ಜನರಿಗೆ ಒಂದಲ್ಲ ಒಂದು ರೀತಿ ಮೈಸೂರು ಮಹಾರಾಜರ ಕೊಡುಗೆ ಅವರ ಋಣ ನಮ್ಮ ಮೇಲಿದೆ. ಕೆಆರ್ ಎಸ್ ಆಣೆಕಟ್ಟುಯಿಂದ ಸಹಸ್ರಾರು ಜನರಿಗೆ ಅನುಕೂಲ ಆಗಿದೆ. ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳಿಸಿಕೊಡಿ ಎಂದು ಸುಮಲತಾ ಅಂಬರೀಶ್ ಮನವಿ ಮಾಡಿದರು.
.






