ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ: ವಿದ್ಯಾರ್ಥಿ ಸಂಸತ್ ಪದಗ್ರಹಣ ಸಮಾರಂಭ

Views: 42
ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಪದಗ್ರಹಣ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಗುರುಕುಲ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಶ್ರೀ.ಪಾಲ್ ಮಚಾಡೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ನಿಜವಾದ ಸಂಸತ್ತಿನ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಣವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದೆ.ನೀವು ಪಡೆದ ಶಿಕ್ಷಣ ಅರ್ಥಪೂರ್ಣವಾಗಬೇಕಾದರೆ ಮೊದಲು ನಿಮ್ಮ ಶಿಕ್ಷಕರನ್ನು ಮತ್ತು ಶಿಕ್ಷಣ ಸಂಸ್ಥೆಯನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಂಡಾಗ ವಿದ್ಯಾರ್ಥಿ ಜೀವನ ಸಾರ್ಥಕವೆನಿಸಿಕೊಳ್ಳುತ್ತದೆ. ಕೌಶಲಭರಿತ ಶಿಕ್ಷಣ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವೃತ್ತಿಪರ ಮತ್ತು ವೈಯಕ್ತಿಕ ಜೀವನಕ್ಕೆ ಸಹಕಾರಿ, ಪ್ರತಿಯೊಬ್ಬ ವಿಧ್ಯಾರ್ಥಿಯು ತನ್ನಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು, ಆ ಗುಣ ಹುಟ್ಟಿನಿಂದ ಬರುವುದಿಲ್ಲ, ಅದನ್ನು ತಾವಾಗಿಯೇ ಬೆಳೆಸಿಕೊಳ್ಳಬೇಕು,ಆ ಗುಣವೇ ಉತ್ತಮ ಮಾತುಗಾರಿಕೆ ಮತ್ತು ನಡವಳಿಕೆಯಿಂದ ಮಾತ್ರ ಬೆಳೆಸಿಕೊಳ್ಳಲು ಸಾಧ್ಯ, ಜೊತೆಗೆ ಸಂಸ್ಥೆಯ ನೀತಿ ನಿಯಮಗಳನ್ನು ಪಾಲಿಸುತ್ತಾ ಸಂಸ್ಥೆಯ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿ ಎಂದು ಹೇಳಿದರು.
ಶಾಲಾ ಪ್ರಾಂಶುಪಾಲರಾದ ಶ್ರೀ ಸುನೀಲ್ ಪ್ಯಾಟ್ರಿಕ್ ವಿದ್ಯಾರ್ಥಿ ಸಂಸತ್ತಿನ ಕಾರ್ಯ ವೈಖರಿ ಬಗ್ಗೆ ವಿವರಿಸಿದರು. ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರಾದ ಶ್ರೀ ಸುಭಾಶ್ಚಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಂಸತ್ತಿನ ಎಲ್ಲಾ ಮುಖಂಡರು ಮತ್ತು ಸದಸ್ಯರಿಗೂ ನಾಯಕನ ಪಾತ್ರ ಎಷ್ಟು ಮುಖ್ಯ ಎನ್ನುವುದನ್ನು ತಿಳಿ ಹೇಳಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಅನುಪಮಾ ಎಸ್.ಶೆಟ್ಟಿ ಇವರು ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಶಾಲಾ ಮುಖಂಡರಾಗಿ ಭರತ್, ಕುಮಾರಿ ಕೀರ್ತನಾ ಕೆ.ಆರ್ ಮತ್ತು ಕ್ರೀಡಾ ಕಾರ್ಯದರ್ಶಿಗಳಾಗಿ ಈಶ್ವರ್ ಮತ್ತು ಶಶಾಂಕ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಪೃಥ್ವಿ ಕೆ.ಪಿ ಮತ್ತು ತ್ರತಿ ಶೆಟ್ಟಿ, ಶಿಸ್ತು ಕಾರ್ಯದರ್ಶಿಗಳಾಗಿ ಯಶಸ್ ಬಿ.ಎಂ ಮತ್ತು ಕುಮಾರಿ.ಗೌತಮಿ. ಜೊತೆಗೆ ವಿವಿಧ ಹೌಸ್ ನ ಮುಖಂಡರು ಮತ್ತು ತರಗತಿಯ ಮುಖಂಡರು ಅಧಿಕಾರ ವಹಿಸಿಕೊಂಡರು. ಸಂಯೋಜಕಿ ಸುಷ್ಮಾ ಪರಿಚಯಿಸಿದರು.
ಸಹಶಿಕ್ಷಕಿ ಸುಮಲತಾ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ವನಿತಾ ಸ್ವಾಗತಿಸಿದರು. ಶಾಲಾ ಮುಖಂಡ ಮಾಸ್ಟರ್ ಭರತ್ ವಂದಿಸಿದರು.