ಶಿಕ್ಷಣ

ಕರಾಟೆ ಸ್ಪರ್ಧೆ: ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

Views: 1042

ಕುಂದಾಪುರ : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸರಕಾರಿ ಪ್ರೌಢಶಾಲೆ ಬಸ್ರೂರು ಇವರ ಜಂಟಿ ಸಹಭಾಗಿತ್ವದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್ ವಿದ್ಯಾರ್ಥಿಗಳು ವಿಶಿಷ್ಟ ಸಾಧನೆ ಮಾಡಿದ್ದಾರೆ.

ಕುಮಾರಿ ರಿಧಾ ಫರ್ವಿನ್ ಪ್ರಥಮ ಸ್ಥಾನ (ಪ್ರೌಢಶಾಲೆ ವಿಭಾಗ )ಹಾಗೂ ಕುಮಾರ ಕಿಶನ್ ಶೆಟ್ಟಿ ಮತ್ತು ಕುಮಾರ ತನ್ಮಯ್ ತೃತೀಯ ಸ್ಥಾನ ಪಡೆದಿರುತ್ತಾರೆ ಕುಮಾರಿ ರಿಧಾ ಫರ್ವಿನ್ ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.ಕರಾಟೆ ಶಿಕ್ಷಕಿ ಕುಮಾರಿ ಮೇಘನಾ ತರಬೇತಿ ನೀಡಿರುತ್ತಾರೆ.

ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತಾಧಿಕಾರಿಗಳು, ಮುಖ್ಯ ಶಿಕ್ಷಕರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Related Articles

Back to top button