ರಾಜಕೀಯ

ಈ ಕನಕಪುರದ ಬಂಡೆ ಸಿದ್ದರಾಮಯ್ಯ ಜೊತೆ ಇದೆ: ಬಿಜೆಪಿ-ಜೆಡಿಸ್ ವಿರುದ್ಧ ಗುಡುಗಿದ ಡಿಕೆಶಿ

Views: 33

ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ಜನಾಂದೋಲನ ಸಮಾವೇಶದಲ್ಲಿ ಬಿಜೆಪಿ-ಜೆಡಿಸ್ ವಿರುದ್ಧ ಗುಡುಗಿದ ಡಿಕೆಶಿ ಗುಡುಗಿದರು. “ಹಿಂದುಳಿದ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಅವರನ್ನು ಮುಡಾ ಹಗರಣದಲ್ಲಿ ಸಿಕ್ಕಿ ಹಾಕಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ. ಈ ಕನಕಪುರದ ಬಂಡೆ ಸಿಎಂ ಜೊತೆ ಸದಾ ಇರಲಿದೆ. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ” ಎಂದರು.

“ನಾವು ನುಡಿದಂತೆ ನಡೆದಿದ್ದೇವೆ. ಬಡ ಜನರಿಗಾಗಿ ಶ್ರಮಿಸಿದ್ದೇವೆ. ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದನ್ನು ಸಹಿಸಲಾಗದೆ ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಮುಡಾ ಸೈಟ್ ಯಾರ ಆಡಳಿತಾವಧಿಯಲ್ಲಿ ನೀಡಲಾಗಿದೆ? ಬಿಜೆಪಿ ಅವಧಿಯಲ್ಲೇ ಆಗಿದೆ. ಆಗ ಎಲ್ಲಿಗೆ ಹೋಗಿತ್ತು ಹಗರಣ ವಿಚಾರ?” ಎಂದು ಡಿಕೆಶಿ ಪ್ರಶ್ನಿಸಿದರು.

ಇದೇ ವೇಳೆ ಬಿಜೆಪಿ -ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳುವ ಮುನ್ನ ಪರಸ್ಪರ ವಾಗ್ದಾಳಿ ನಡೆಸಿದ್ದ ವಿಡಿಯೋಗಳನ್ನು ವೇದಿಕೆಯಲ್ಲಿ ಪ್ರಸಾರ ಮಾಡಿಸಿದರು.

“ಕುಮಾರಸ್ವಾಮಿ ನಂಬಿದವರನ್ನು ಮುಗಿಸುತ್ತಾರೆ. ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿದ್ದೇನೆ, ಮುಂದೆ ಮಾಡುತ್ತೇನೆ. ವಿಜಯೇಂದ್ರ ಎಷ್ಟು ಕೊಳ್ಳೆ ಹೊಡೆದಿದ್ದಾರೆ ಎಂಬುವುದು ಹೊರಬರಲಿದೆ. ಕೊರೋನಾ ಸಮಯದಲ್ಲಿ ಬಡವರ ಹಣ ತಿಂದಿದ್ದಾರೆ. ಇಂತಹ ಭ್ರಷ್ಟರನ್ನು ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಸಬೇಕಾ? ವಿಜಯೇಂದ್ರ ಅಂದ್ರೆ ಭ್ರಷ್ಟಾಚಾರ” ಎಂದರು.

“ರಾಜ್ಯದ ಜನರು, ಸಂವಿಧಾನದ ರಕ್ಷಣೆಗೋಸ್ಕರ, ನಮ್ಮ ಸರ್ಕಾರವನ್ನು ಉರುಳಿಸುವ, ನಾವು ಜನರಿಗೆ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ನಡೆಯುತ್ತಿದೆ. ಅದರಿಂದ ರಕ್ಷಣೆಗೋಸ್ಕರ ಈ ಜನಾಂದೋಲನ ಆಯೋಜಿಸಿದ್ದೇವೆ” ಎಂದು ಹೇಳಿದರು.

Related Articles

Back to top button
error: Content is protected !!