ಯುವಜನ

ಮೊಬೈಲ್ ಹೆಚ್ಚು ಬಳಕೆ ಮಾಡದಂತೆ ಪಾಲಕರು ಬುದ್ದಿ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ

Views: 72

ಹುಬ್ಬಳ್ಳಿ: ಮೊಬೈಲ್ ಗೀಳಿನಿಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಮನಗಟ್ಟಿಯಲ್ಲಿ ನಡೆದಿದೆ.

ಸಮೃದ್ಧ ಭೈರಿದೇವರಕೊಪ್ಪ (13)ಎಂಬ ಬಾಲಕ ಮೃತಪಟ್ಟಿದ್ದಾನೆ. ಮೊಬೈಲ್ ಹೆಚ್ಚು ಬಳಕೆ ಮಾಡುತ್ತಿದ್ದ ಹಿನ್ನಲೆಯಲ್ಲಿ ಮೊಬೈಲ್ ಬಳಕೆ ಮಾಡದಂತೆ ಪಾಲಕರು ಬುದ್ದಿ ಹೇಳಿದ್ದಾರೆ ಎನ್ನಲಾಗಿದೆ. ಇದೇ ವಿಷಯಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!