ಕರಾವಳಿ

ಕೋಟ ಪಡುಕರೆಯಲ್ಲಿ ಮರಣಬಲೆಯನ್ನು ಮೇಲೇತ್ತುವಾಗ ಸಮುದ್ರದ ಅಲೆಗೆ ಸಿಲುಕಿ ಮೀನುಗಾರ ಸಾವು

Views: 91

ಕೋಟ: ಉಡುಪಿ ಜಿಲ್ಲೆಯ ಕೋಟ ಸಮೀಪ ಸಮುದ್ರದಲ್ಲಿ ಮರಣಬಲೆ ಬಿಡಲು ಹೋಗಿ ವ್ಯಕ್ತಿ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಪಾರಂಪಳ್ಳಿ ಪಡುಕರೆಯಲ್ಲಿ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿ ಭಾಸ್ಕರ ಪೂಜಾರಿ (55) ಎಂದು ತಿಳಿಯಲಾಗಿದೆ.

ಭಾಸ್ಕರ ಪೂಜಾರಿ ಪಾರಂಪಳ್ಳಿಯ ಮರಿನಾ ಮನೆ ಗೆಸ್ಟ್ ಹೌಸ್ ಸಮೀಪ ಸಮುದ್ರದಲ್ಲಿ ಬಿಟ್ಟಿದ್ದ ಮರಣಬಲೆಯನ್ನು ಮೇಲೇತ್ತಲು ಸಮುದ್ರಕ್ಕೆ ಇಳಿದಾಗ ಸಮುದ್ರದ ಅಲೆಗೆ ಸಿಲುಕಿ ಮುಳುಗಿರುತ್ತಾರೆ.

ತಕ್ಷಣ ಮಲ್ಪೆ ಕರಾವಳಿ ಪೊಲೀಸ್ ಠಾಣೆಯ ಕೆ.ಎನ್.ಡಿ. ಸಿಬ್ಬಂದಿಗಳಾದ ಸತೀಶ್ ಮತ್ತು ಸುದರ್ಶನ್ ಎಸ್. ಕುಂದರ್ ಇವರು ಸಮುದ್ರಕ್ಕೆ ಹಾರಿ ವ್ಯಕ್ತಿಯನ್ನು ದಡಕ್ಕೆ ತಂದು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಸಾಗಿಸಿರುತ್ತಾರೆ.ಆದರೆ ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ ಭಾಸ್ಕರ ಪೂಜಾರಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

Related Articles

Back to top button
error: Content is protected !!