ಕರಾವಳಿ

ಮಗನನ್ನು ಕಾಲೇಜಿಗೆ ಸೇರಿಸಿ ಬರುತ್ತಿದ್ದ ವೇಳೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಿಕ್ಷಕಿ ಸಾವು

Views: 150

ಮಡಿಕೇರಿ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನೊ(50) ಮೃತಪಟ್ಟಿದ್ದಾರೆ. ಈ ಘಟನೆ ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದಿದೆ. ಕ್ರಿಸ್ಟಲಿನೊ ವಿರಾಜಪೇಟೆ ಬೇಟೋಳಿ ನಿವಾಸಿ ಎಂದು ಗುರುತಿಸಲಾಗಿದೆ.

ಬುಧವಾರ ತಮ್ಮ ಮಗನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ ಬೊಲೆರೋ ವಾಹನ ಢಿಕ್ಕಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕ್ರಿಸ್ಟಲಿನೊರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು(ಸೆ.26) ಬೆಳಿಗ್ಗೆ ಮೃತಪಟ್ಟಿದ್ದಾರೆ.

 

Related Articles

Back to top button
error: Content is protected !!