ಸಾಂಸ್ಕೃತಿಕ

ಹೊಡೆದಾಡಿಕೊಂಡು ಠಾಣೆ ಮೆಟ್ಟಿಲೇರಿದ  ಬಿಗ್‌ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ದಂಪತಿ!

Views: 328

ಹುಬ್ಬಳ್ಳಿ :ಬಿಗ್‌ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ದಾಂಪತ್ಯದಲ್ಲಿ ಕಲಹ ಉಂಟಾಗಿ ಈ ಜೋಡಿ ಹೊಡೆದಾಡಿಕೊಂಡು ಠಾಣೆ ಮೆಟ್ಟಿಲೇರಿದ ಪ್ರಸಂಗವೂ ನಡೆದಿದೆ.

ಮಗುವಿಗೆ ಬೈದಿದ್ದಕ್ಕೆ ಗಂಡ, ಅತ್ತೆ, ಮಾವ ಸೇರಿ ಥಳಿಸಿದ್ದಾರೆ ಎಂದು ಸಮೀರ್ ಆಚಾರ್ಯ ಪತ್ನಿ ಹುಬ್ಬಳ್ಳಿ ಮಹಿಳಾ ಠಾಣೆ ಮೆಟ್ಟಿಲೇರಿದ್ದಾರೆ. ಹುಬ್ಬಳ್ಳಿ ವಿಶ್ವೇಶ್ವರ ನಗರದಲ್ಲಿ ಘಟನೆ ನಡೆದಿದೆ.

ಮಗಳು ಅಳುತ್ತಿದ್ದ ಕಾರಣಕ್ಕೆ ಸಮೀರ್ ಪತ್ನಿ ಶ್ರಾವಣಿ ಗದಸಿದ್ದಾರೆ. ಅಷ್ಟಕ್ಕೇ ಸಮೀರ್ ತಂದೆ ಆಕೆಯನ್ನು ಬೈದಿದ್ದಾರೆ. ಇದೇ ವಿಷಯ ದೊಡ್ಡದಾಗಿ ಬೆಳೆದು, ಪತಿ ಸಮೀರ್ ತಮ್ಮ ತಂದೆ ತಾಯಿ ಜೊತೆ ಸೇರಿಕೊಂಡು ಮನಬಂದಂತೆ ಹಲ್ಲೆ ಮಾಡಿದ್ದಾರೆ ಎಂದು ಶ್ರಾವಣಿ ಆರೋಪಿಸಿದ್ದಾರೆ. ಅಲ್ಲದೇ ಘಟನೆ ವೇಳೆ ಇನ್ಸ್ಟಾಗ್ರಾಂನಲ್ಲಿ ಲೈವ್ ಹೋಗಿದ್ದಕ್ಕೆ ತನ್ನ ಮೊಬೈಲ್ ಒಡೆದುಹಾಕಿ ಹಲ್ಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಇನ್ನೊಂದೆಡೆ ಸಮೀರ್ ಆಚಾರ್ಯ ತಂದೆಯ ತಲೆಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ತನ್ನ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಶ್ರಾವಣಿ ಠಾಣೆ ಮೆಟ್ಟಿಲೇರಿದ್ದರು. ಇತ್ತ ಸಮೀರ್ ಆಚಾರ್ಯ ತಂದೆಯೂ ಸೊಸೆ ವಿರುದ್ಧ ದೂರು ನೀಡಲು ಮುಂದಾಗಿದ್ದರು. ಸಮೀರ್ ತಂದೆ ರಾಘವೇಂದ್ರ ಮಣ್ಣೂರ ಅವರಿಗೂ ತಲೆಗೆ ಪೆಟ್ಟಾಗಿತ್ತು. ಬಳಿಕ ಠಾಣೆಯಲ್ಲಿ ಕೌನ್ಸಲಿಂಗ್ ಮಾಡಿದ ಪೊಲೀಸರು ದಂಪತಿ, ಅತ್ತೆ-ಮಾವರನ್ನು ಒಂದು ಮಾಡಿ ಮನೆಗೆ ಕಳಿಸಿದ್ದಾರೆ.

Related Articles

Back to top button
error: Content is protected !!