ರಾಜಕೀಯ

ಪರಿಷತ್‌ ಉಪಚುನಾವಣೆ: ಬೈಂದೂರಿನ ರಾಜು ಪೂಜಾರಿಗೆ ಕಾಂಗ್ರೆಸ್‌ ಟಿಕೆಟ್ 

Views: 127

ಉಡುಪಿ: ಕೋಟ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ವಿಧಾನ ಪರಿಷತ್‌ ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಬೈಂದೂರಿನ ರಾಜು ಪೂಜಾರಿಯವರನ್ನು ಹೈಕಮಾಂಡ್ ಘೋಷಿಸಿದೆ.

ಮಂಗಳೂರು ಕಾಂಗ್ರೆಸ್ ಕಛೇರಿಯಲ್ಲಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರುಗಳು ಸೇರಿ ಅ.3 ರಂದು 12 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾ‌ರ್ ಕೊಡವೂರು ತಿಳಿಸಿದ್ದಾರೆ.

Related Articles

Back to top button
error: Content is protected !!