ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು

Views: 185
ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಉದ್ಯಮಿ ವಿಜಯ್ ಟಾಟಾ ದೂರಿನನ್ವಯ ಅಮೃತಹಳ್ಳಿ ಪೊಲೀಸರು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಬಳಿ ಹೆಚ್.ಡಿ.ಕುಮಾರಸ್ವಾಮಿ 50 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಕರಣದಲ್ಲಿ ರಮೇಶ್ಗೌಡ ಎ1 ಆರೋಪಿಯಾಗಿದ್ದು, ಹೆಚ್.ಡಿ.ಕುಮಾರಸ್ವಾಮಿ ಎ2 ಆರೋಪಿಯಾಗಿದ್ದಾರೆ. ಬಿಎನ್ಎಸ್ ಸೆಕ್ಷನ್ 3(05), 308(02), 351(02) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿರುವ ಅಮೃತಹಳ್ಳಿ ಪೊಲೀಸರು ಕುಮಾರಸ್ವಾಮಿಯವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
308 ಬಿಎನ್ಎಸ್ ಸೆಕ್ಷನ್ ಸುಲಿಗೆ ಆರೋಪದ ಕೇಸ್ ಆಗಿದ್ದು 7 ವರ್ಷದ ತನಕ ಶಿಕ್ಷೆಯಾಗುವ ಸಾಧ್ಯತೆ ಇದೆ. ಅದು ಅಲ್ಲದೇ ಇದು ಜಾಮೀನುರಹಿತ ಸೆಕ್ಷನ್ ಆಗಿರುವುದರಿಂದ ಕುಮಾರಸ್ವಾಮಿಯವರ ಬಂಧನ ಸಾಧ್ಯತೆ ಇದೆ. 351 ಸೆಕ್ಷನ್ ಜಾಮೀನು ಸಿಗುವ ಕೇಸ್ ಆಗಿದ್ದು ಇದರಲ್ಲಿ ಎರಡು ವರ್ಷದ ತನಕ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.






