ಸಾಂಸ್ಕೃತಿಕ

ಮಗಳು ಆರಾಧನಾ ಜತೆ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಮಾಲಾಶ್ರೀ

Views: 174

ಉಡುಪಿ: ಕನ್ನಡ ಚಿತ್ರರಂಗದ ಖ್ಯಾತ ನಟ ಮಾಲಾಶ್ರೀ ಹಾಗೂ ಅವರ ಮಗಳು ಆರಾಧನಾ ಅವರು ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.

ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾದರು. ಮಾಲಾಶ್ರೀ ಜೊತೆ ಪುತ್ರಿ ಆರಾಧನಾ ಕೂಡ ಮಠಕ್ಕೆ ಬಂದಿದ್ದರು.

ಈ ಪರ್ಯಾಯದಲ್ಲಿ ಕೋಟಿಬಾರಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞ ದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.

ಕಾಟೇರಾ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ಆರಾಧನಾ ಅವರು ಇದೀಗ ಸ್ಯಾಂಡಲ್‌ವುಡ್‌ನಲ್ಲಿ ಆಕ್ಟೀವ್ ಆಗಿದ್ದಾರೆ. ಕಾಟೇರಾ ಸಿನಿಮಾದಲ್ಲಿನ ಅಭಿನಯಕ್ಕೆ ಫುಲ್ ಮಾರ್ಕ್ಸ್‌ ಪಡೆದ ಆರಾಧನಾ ಅವರು ಸದ್ಯ ರೆಡ್‌ ಕಾರ್ಪೆಟ್‌ನಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಈಚೆಗೆ ಸೈಮಾ ಇವೆಂಟ್‌ನಲ್ಲೂ ಕಾಣಿಸಿಕೊಂಡರು.

 

Related Articles

Back to top button
error: Content is protected !!