ಆರೋಗ್ಯ

ಎರಡು ವರ್ಷಗಳ ಹಿಂದೆ ಮಹಿಳೆ ಹೊಟ್ಟೆಯೊಳಗೆ ಕತ್ತರಿ ಬಿಟ್ಟ ಪ್ರಕರಣ:ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕ್ರಮ

Views: 118

ಕನ್ನಡ ಕರಾವಳಿ ಸುದ್ದಿ: ಎರಡು ವರ್ಷಗಳ ಹಿಂದೆ ಕ್ಯಾನ್ಸರ್ ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಮಹಿಳೆಯ ಆಪರೇಷನ್ ಮಾಡಿದ ವೈದ್ಯರು ಆಕೆಯ ಹೊಟ್ಟೆಯೊಳಗೆ ಕತ್ತರಿ ಹಾಗೇ ಬಿಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದ ಈ ಪ್ರಕರಣದಲ್ಲಿ ಎರಡು ವರ್ಷಗಳ ಬಳಿಕ ಮಹಿಳೆಯ ಹೊಟ್ಟೆಯ ಒಳಗಿನಿಂದ ಕತ್ತರಿ ಹೊರಗೆ ತೆಗೆಯಲಾಗಿದೆ.

ಮಾಹಿತಿಗಳ ಪ್ರಕಾರ, 2 ವರ್ಷಗಳ ಹಿಂದೆ ಗ್ವಾಲಿಯರ್ನ ಸರ್ಕಾರಿ ಆಸ್ಪತ್ರೆಯಲ್ಲಿ ಆ ಮಹಿಳೆ ಆಪರೇಷನ್ ಮಾಡಿಸಿಕೊಂಡ ವೇಳೆ ವೈದ್ಯರು ಆಕೆಯ ಹೊಟ್ಟೆಯಲ್ಲಿ ಕತ್ತರಿ ಬಿಟ್ಟಿದ್ದಾರೆ. ಭಿಂಡ್ ಜಿಲ್ಲಾ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಉಸ್ತುವಾರಿ ಸತೀಶ್ ಶರ್ಮಾ ಅವರು ಕಮಲಾ ಎಂಬ ಮಹಿಳೆಯ ಸಿಟಿ ಸ್ಕ್ಯಾನ್ ಮಾಡುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ.

ಏನಿದು ಪ್ರಕರಣ?:ಮಹಳೆಯ ಹೊಟ್ಟೆಯ ಕ್ಯಾನ್ಸರ್‌ಗಾಗಿ 2022ರ ಫೆಬ್ರವರಿ 20ರಂದು ಗ್ವಾಲಿಯರ್‌ನ ಕಮಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆ ವೇಳೆ ವೈದ್ಯರು ನಿರ್ಲಕ್ಷ್ಯ ವಹಿಸಿ ಮಹಿಳೆಯ ಹೊಟ್ಟೆಯಲ್ಲಿ ಕತ್ತರಿ ಬಿಟ್ಟಿದ್ದಾರೆ. ಮಹಿಳೆಗೆ ಅದರ ಅರಿವೇ ಇರಲಿಲ್ಲ. ಆದರೆ, ಕಳೆದ ಕೆಲವು ದಿನಗಳಿಂದ ಮಹಿಳೆಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಔಷಧಿ ನೀಡಿದರೂ ನೋವು ಕಡಿಮೆಯಾಗದಿದ್ದಾಗ ವೈದ್ಯರು ಸಿಟಿ ಸ್ಕ್ಯಾನ್ ಮಾಡುವಂತೆ ಸೂಚಿಸಿದ್ದು, ಈ ವೇಳೆ ಹೊಟ್ಟೆಯಲ್ಲಿ ಕತ್ತರಿ ಸ್ಪಷ್ಟವಾಗಿ ಗೋಚರಿಸಿದೆ. ಹೊಟ್ಟೆಯಲ್ಲಿದ್ದ ಕತ್ತರಿ ಮಹಿಳೆಗೆ ಮಾರಕವಾಗಬಹುದು. ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಹಾಗೂ ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಂತ್ರಸ್ತೆ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಮಾಡಿರುವ ವೈದ್ಯ ಸತೀಶ್ ಶರ್ಮಾ ಕೂಡ ಇದನ್ನು ಖಚಿತಪಡಿಸಿದ್ದಾರೆ

Related Articles

Back to top button
error: Content is protected !!